ಸಂಗ್ರಹ ಚಿತ್ರ 
ರಾಜ್ಯ

ನಾಗರಹೊಳೆ: ಕೊಳೆತ ಸ್ಥಿತಿಯಲ್ಲಿ ಹುಲಿ ದೇಹ ಪತ್ತೆ

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ...

ಮಡಿಕೇರಿ; ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 
ನಾಗರಹೊಳೆಯಿಂದ ಸುಂಕದಕಟ್ಟೆಗೆ ತೆರಳುವ ಹಾದಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ. ಘಟನೆ ಸೇರಿದಂತೆ ಜನವರಿ ತಿಂಗಳೊಂದರಲ್ಲಿ ಒಟ್ಟು ಮೂರು ಹುಲಿಗಳು ಸಾವನ್ನಪ್ಪಿದೆ. ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಈ ಹಿಂದೆ ಎರಡು ಹುಲಿಗಳು ಸಾವನ್ನಪ್ಪಿದ್ದವು. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅರಣ್ಯಾಧಿಕಾರಿಗಳು ಹಾಗೂ ತಜ್ಞರು ಪರಿಶೀನೆ ನಡೆಸುತ್ತಿದ್ದಾರೆ. ತಲೆ ಹಾಗೂ ಮುಂದಿನ ಕಾಲಿನ ಭಾಗ ಹೊರತುಪಡಿಸಿ ದೇಹದ ಇತರ ಭಾಗ ಸಂಪೂರ್ಣವಾಗಿ ಕೊಳೆತು ಹೋಗಿದೆ. ಹುಲಿಯ ಕತ್ತು, ಮುಖ ಹಾಗೂ ದೇಹದ ಹಲವು ಭಾಗದಲ್ಲಿ ಮತ್ತೊಂದು ಹುಲಿ ದಾಳಿ ನಡೆಸಿ ಆಳವಾದ ಗಾಯ ಮಾಡಿದ್ದು, ಹುಲಿಯ ದೇಹ ಅರ್ಧಭಾಗ ಕೊಳೆತಿರುವುದರಿಂದ ಗಂಡು ಅಥವಾ ಹೆಣ್ಣು ಎಂದು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಮತ್ತೊಂದು ಹುಲಿಯೊಂದಿಗಿನ ಕಾದಾಟದಲ್ಲಿ ಹುಲಿ ಸಾವನ್ನಪ್ಪಿದೆ. ಹುಲಿಯ ತಲೆ ಭಾಗದಲ್ಲಿ ನಾಲ್ಕು ಜಾಗದಲ್ಲಿ ಗಾಯದ ಗುರುತುಗಳು ಪತ್ತೆಯಾಗಿದೆ. ಹುಲಿಯ ದೇಹ ಅರ್ಧಭಾಗ ಕೊಳೆತುಹೋಗಿರುವುದರಿಂದ ಲಿಂಗ ಯಾವುದು ಎಂದು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹುಲಿ ಯೋಜನಾ ನಿರ್ದೇಶಕ ಮಣಿಕಾಂತ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT