ಸಂತೋಷ್ ಹತ್ಯೆ ಪ್ರಕರಣ ತನ್ಖೆಯನ್ನು ಎನ್ಐಎಗೆ ವಹಿಸಿ: ಮಾಜಿ ಡಿಸಿಎಂ ಆರ್. ಅಶೋಕ್ ಆಗ್ರಹ 
ರಾಜ್ಯ

ಸಂತೋಷ್ ಹತ್ಯೆ ಪ್ರಕರಣ ತನಿಖೆಯನ್ನು ಎನ್ಐಎಗೆ ವಹಿಸಿ: ಮಾಜಿ ಡಿಸಿಎಂ ಆರ್. ಅಶೋಕ್ ಆಗ್ರಹ

ಬೆಂಗಳೂರಿನಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಮೃತ ಸಂತೋಷ್ ನಿವಾಸಕ್ಕೆ ಭೇಟಿ ನೀಡಿದ್ದ ಅಶೋಕ್ "ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲವಾಗಿದ್ದು ಈ ಹತ್ಯಯ ಹಿಂಡೆ ಸ್‌ಡಿಪಿಐ ಮತ್ತು ಕೆಎಫ್‌ಡಿ ಕೈವಾಡ ಇದೆ. ಪ್ರಕರಣದ ತನಿಖೆಗೆ ಮುನ್ನವೇ ಇದು ಹಳೆ ದ್ವೇಷದಿಂಡ ಹತ್ಯೆ ನಡೆದಿದೆ ಎನ್ನುವ ರಾಜ್ಯ ಸರ್ಕಾರದ ಹೇಳಿಕೆ ಖಂಡನಾರ್ಹವಾದದ್ದು. " ಎಂದು ಹೇಳಿದ್ದಾರೆ.
"ಕೊಲೆ ಆರೋಪಿಯು ಗಾಂಜಾ ದಂಧೆಯಲ್ಲಿ ತೊಡಗಿಕೊಂಡಿರುವುದು ಖಚಿತವಾಗಿದ್ದು ಅಲ್ಪಸಂಖ್ಯಾತರ ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳುವ ನಿರ್ಧಾರದಿಂದ ರಾಜ್ಯದಲ್ಲಿ ಹಿಂದೂಗಳ ಕೊಲೆ ಅವ್ಯಾಹತವಾಗಿ ನಡೆಯುತ್ತಿದೆ. ಕಮಿಷನರ್ ಮತ್ತು ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡುವವರೆಗೂ ಸಂತೋಷ್ ಅಂತ್ಯ ಸಂಸ್ಕಾರಕ್ಕೆ ಆಸ್ಪದ ನೀಡಲಾಗುವುದಿಲ್ಲ " ಎಂದು ಅಶೋಕ್ ಹೇಳಿದ್ದಾರೆ.
ಬಂಟಿಂಗ್ಸ್ ಜಗಳಕ್ಕೆ ಬಲಿ
ಬಿಜೆಪಿ ಕಾರ್ಯಕರ್ತ ಸಂತೋಷ್ ಬಂಟಿಂಗ್ಸ್ ಜಗಳಕ್ಕೆ ಬಲಿಯಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
'ಕೊಲೆ ಸಂಖ್ಯೆ 23. ಫೆಬ್ರವರಿ 4 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಸಂಬಂಧ ಸಂತೋಷ್ ತಮ್ಮ ಏರಿಯಾದಲ್ಲಿ ಬಂಟಿಂಗ್ಸ್ ಹಾಕುವಲ್ಲಿ ನಿರತರಾಗಿದ್ದರು, ಈ ವಿಚಾರವಾಗಿ ವಸೀಮ್ ಹಾಗೂ ಸಂತೋಷ್ ನಡುವೆ ಗಲಾಟೆ ನಡೆದಿತ್ತು. ಆದರೆ ಇದೇ ದ್ವೇಷದಿಂದ ಕೊಲೆ ಮಾಡಲಾಗಿದೆ ' ಪ್ರತಾಪ್ ಸಿಂಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನ ನಂದಿದುರ್ಗಾ ರಸ್ತೆಯ ಚಿನ್ನಪ್ಪ ಗಾರ್ಡನ್‌ನಲ್ಲಿ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ನಡೆದಿದ್ದು ರಾಮಸ್ವಾಮಿ ಪಾಳ್ಯ ವಾರ್ಡ್ ಅಧ್ಯಕ್ಷ ಖಾದರ್ ಮಗ ವಾಸೀಂ ಹಾಗೂ ಆತನ ಸ್ನೇಹಿತ ಪಿಲಿಪ್ಸ್ ಇಬ್ಬರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ. ದುಷ್ಕರ್ಮಿಗಳು ಸಂತೋಷ್ ಅವರ  ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

SCROLL FOR NEXT