ಮಳವಳ್ಳಿ ಠಾಣೆಯಲ್ಲಿ ಮಹಿಳಾ ಪೇದೆಗಳಿಗೆ ಸೀಮಂತ 
ರಾಜ್ಯ

ಮಳವಳ್ಳಿ: ಠಾಣೆಯಲ್ಲೇ ಮಹಿಳಾ ಪೇದೆಗಳಿಗೆ ಸೀಮಂತ ಮಾಡಿ ಆತ್ಮೀಯತೆ ಮೆರೆದ ಪೊಲೀಸ್ ಸಿಬ್ಬಂದಿ

ಮಂಡ್ಯ ಜಿಲ್ಲೆಯ ಮಳವಳ್ಳಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ ಠಾಣೆಯ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡುವ ಮೂಲಕ ಸಂಭ್ರಮಾಚರಣೆ ...

ಮಳವಳ್ಳಿ:  ಪೊಲೀಸರೆಂದರೆ ದಿನದ 24 ಗಂಟೆಯೂ ಕೆಲಸ ಮಾಡುವವರು. ಇಂತವರಿಗೆ ಸಮಯವೇ ಇರುವುದಿಲ್ಲ. ಇದರ ನಡುವೆಯೂ ಮಹಿಳಾ ಪೇದೆಗಳಿಗೆ ಠಾಣೆಯಲ್ಲೇ ಸೀಮಂತ ಮಾಡಿದ ಅಪರೂಪದ ಪ್ರಸಂಗ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. 
ಮಂಡ್ಯ ಜಿಲ್ಲೆಯ ಮಳವಳ್ಳಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ ಠಾಣೆಯ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು. ಮಳವಳ್ಳಿ ಠಾಣೆಯಲ್ಲಿ ಕೆಲಸ ಮಾಡುವ ಪ್ರೇಮಾ ಮತ್ತು ಶೃತಿ ಅವರಿಗೆ ಠಾಣೆಯ ಸಿಬ್ಬಂದಿ ತಮ್ಮ ಸ್ವಂತ ಸಹೋದರಿಯರಿಗೆ ಮಾಡುವ ರೀತಿಯಲ್ಲಿ ಸೀಮಂತ ಕಾರ್ಯ ಮಾಡಿದ್ದಾರೆ.
ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆ ಆಗಿ ಕೆಲಸ ನಿರ್ವಹಿಸುತ್ತಿರುವ ಶೃತಿ ಹಾಗೂ ಪ್ರೇಮ ಹೆರಿಗೆ ರಜೆ ಪಡೆದು ಮನೆಗೆ ತೆರಳಲು ಅವರು ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಅವರ  ಸಹೋದ್ಯೋಗಿಗಳು ಪೊಲೀಸ್ ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡು, ಮನೆಗಳಲ್ಲಿ ಕುಟುಂಬ ವರ್ಗದವರು ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಮಾಡುವಂತೆಯೇ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಸ್ಕೃತಿಯಂತೆ ಸೀಮಂತ ಮಾಡಿದರು.
ಠಾಣೆಯಲ್ಲಿ ನಾವು ಸಿಬ್ಬಂದಿ ಒಂದೇ ಕುಟುಂಬದವರಂತೆ ಕೆಲಸ ಮಾಡುತೇವೆ, ಇಂಥಹ ಕೆಲಸಗಳಿಂದ ನಮ್ಮ ನಡುವಿನ ಅಂತರ ಕಡಿಮೆಯಾಗುತ್ತದೆ ಎಂದು ಇನ್ಸ್ ಪೆಕ್ಟರ್ ಶ್ರೀಕಾಂತ್ ತಿಳಿಸಿದರು. ಡಿವೈಎಸ್ಪಿ ಮಲ್ಲಿಕ್, ಸಿಪಿಐಗಳಾದ ಗಂಗಾಧರ್, ಶ್ರೀಕಾಂತ್, ಪಿಎಸ್ಐ ಮಹದೇವು ಸೇರಿದಂತೆ ಹಲವರು ಭಾಗವಹಿಸಿದ್ದರು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT