ಕೆ ಎಸ್ ಈಶ್ವರಪ್ಪ 
ರಾಜ್ಯ

ರಾಜ್ಯಪಾಲರ ಭಾಷಣದಲ್ಲಿ ತಿರುಳಿಲ್ಲ: ಬಿಜೆಪಿ ಆರೋಪ

ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ...

ಬೆಂಗಳೂರು: ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಭಾಷಣ ಮಾಡಿಸಿದ್ದಾರೆ. ಅವರ ಭಾಷಣದಲ್ಲಿ ಯಾವುದೇ ತಿರುಳಿಲ್ಲ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.

ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿರುವ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ, ಸರ್ಕಾರದ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇಲ್ಲ. ರೈತರ ಸಾಲಮನ್ನಾ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಅವರು ತಿಳಿಸಿಲ್ಲ. ಇದು ಸರ್ಕಾರ ತಮಗೆ ಬೇಕಾದಂತೆ ರಾಜ್ಯಪಾಲರಲ್ಲಿ ಮಾಡಿಸಿದ ಭಾಷಣವಾಗಿದೆ. ಅವರ ಭಾಷಣದಲ್ಲಿ ಯಾವುದೇ ತಿರುಳಿಲ್ಲ ಎಂದು ಟೀಕಿಸಿದ್ದಾರೆ.

ಬಿಜೆಪಿ ನಾಯಕ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕೂಡ ಇದೇ ಮಾತುಗಳನ್ನು ಆಡಿದ್ದಾರೆ.

ಮುಂದಿನ ಐದು ವರ್ಷ ಸರ್ಕಾರ ಏನೇನು ಕಾರ್ಯಕ್ರಮ ರೂಪಿಸಲಿದೆ, ಜನರಿಗೆ ಉಪಯೋಗವಾಗುವಂತಹ ಯೋಜನೆಗಳ ಬಗ್ಗೆ ಯಾವುದೇ ಅಂಶಗಳು ರಾಜ್ಯಪಾಲರ ಭಾಷಣದಲ್ಲಿ ಇರಲಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT