ರಾಯಚೂರು: ಖೋತಾನೋಟು ಜಾಲದ 7 ಜನರ ಬಂಧನ, 4.52 ಲಕ್ಷ ರೂ ನಕಲಿ ನೋಟು ವಶ 
ರಾಜ್ಯ

ರಾಯಚೂರು: ಖೋಟಾನೋಟು ಜಾಲದ 7 ಜನರ ಬಂಧನ, 4.52 ಲಕ್ಷ ರೂ ನಕಲಿ ನೋಟು ವಶ

ರಾಯಚೂರು ಜಿಲ್ಲೆಯಲ್ಲಿ ಖೋಟಾ ನೋಟುಗಳನ್ನು ಮುದ್ರಿಸಿ ಪ್ರಸಾರ ಮಾಡುತ್ತಿದ್ದ ಜಾಲವೊಂದು ಪೋಲೀಸರ ಅತಿಥಿಯಾಗಿದೆ. ದೇವದುರ್ಗ ಪೋಲೀಸರು.....

ದೇವದುರ್ಗ: ರಾಯಚೂರು ಜಿಲ್ಲೆಯಲ್ಲಿ ಖೋಟಾ ನೋಟುಗಳನ್ನು ಮುದ್ರಿಸಿ ಪ್ರಸಾರ ಮಾಡುತ್ತಿದ್ದ ಜಾಲವೊಂದು ಪೋಲೀಸರ   ಅತಿಥಿಯಾಗಿದೆ. ದೇವದುರ್ಗ ಪೋಲೀಸರು ನಕಲಿ ನೋಟು ದಂಧೆಯಲ್ಲಿ ತೊಡಗಿದ್ದ  7 ಜನರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬಸಾಪುರ ಕ್ಯಾಂಪಿನ ಟಿ.‌ ಶ್ರೀನಿವಾಸ, ಹುಸೇನನಗರದ ರಾಮಕೃಷ್ಣ, ತಳವಾರದೊಡ್ಡಿಯ ಅಯ್ಯಾಳಪ್ಪ, ಗದ್ವಾಲ್ ತಾಲೂಕಿನ ಹನುಮಂತ, ಜಾಲಹಳ್ಳಿಯ ಪ್ರಕಾಶ, ಚಿಕ್ಕಬೂದೂರಿನ ಬಸವರಾಜ ಮತ್ತು ರಾಮಲಿಂಗೇಶ್ವರ ಕಾಲೋನಿಯ ಸೈಯದ್ ಉಸ್ಮಾನ ಎಂದು ಗುರುತಿಸಲಾಗಿದೆ. ಇವರಿಂದ  4.52 ಲಕ್ಷ ರೂ. ಮೌಲ್ಯದ 2,000 ರೂ. ಮತ್ತು 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.
ಅಲ್ಲದೆ ಆರೋಪಿಗಳ ಬಲಿ ಇದ್ದ ನೋಟು ಕಾಗದ ಮತ್ತು ರಾಸಾಯನಿಕ ವಸ್ತುಗಳನ್ನು ಸಹ ಜಪ್ತಿ ಮಾಡಲಾಗಿದ್ದು ಇವರುಗಳು ಬೆಂಗಳೂರು ಮೂಲದ ಅಬ್ದುಲ್​ ರಹಮಾನ್ ಎನ್ನುವಾತನಿಂದ ಈ ನಕಲಿ ನೋಟು ಮುದ್ರಣ ಸಾಮಗ್ರಿಗಳನ್ನು ಖರೀದಿಸಿದ್ದರೆಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಹಲವು ವರ್ಷಗಳೀಂದ ಕಳ್ಳ ನೋಟಿನ ದಂಧೆ ನಡೆಯುತ್ತಿದೆ ಚುನಾವಣಾ ವೇಳೆ ದೇವದುರ್ಗದ ಜಾಲಹಳ್ಳಿಯಲ್ಲಿ 500  ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದವೆನ್ನುವುದನ್ನು ನಾವಿಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

IPL 2026: RCB ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಬಗ್ಗೆ ಮೌನ ಮುರಿದ MI; ಹೇಳಿದ್ದೇನು?

ಕಾಂಗ್ರೆಸ್ ಊಸರವಳ್ಳಿಗಿಂತ ಬೇಗ ಬಣ್ಣ ಬದಲಿಸುತ್ತೆ: ಶಶಿ ತರೂರ್ ಎದುರೇ ಅಣ್ಣಾಮಲೈ ತೀವ್ರ ಟೀಕೆ- ಪ್ರತಿಕ್ರಿಯೆ ಏನು?| video

ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ: ಬೆಂಗಳೂರಿಗೆ ದೌಡಾಯಿಸಿದ NIA, ಓರ್ವ ಆರೋಪಿಯ ಬಂಧನ!

ನೇಪಾಳದಿಂದ ಭಾರತಕ್ಕೆ ಅಪಮಾನ?; ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ನಿರಾಕರಿಸಿದ ಪ್ರಧಾನಿ ಬಾಲೇನ್ ಶಾ: ವರದಿ

SCROLL FOR NEXT