ಅಜಯ್ ಸೇಠ್ 
ರಾಜ್ಯ

ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್ ಸೇಠ್ ನೇಮಕ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹಾಗೂ ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಅಜಯ್ ಸೇಠ್‌ ಅವರನ್ನು ಮೆಟ್ರೋ...

ಬೆಂಗಳೂರು: ನಮ್ಮ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್‌ ಸೇಠ್‌  ನೇಮಕಗೊಂಡಿದ್ದಾರೆ. 
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹಾಗೂ ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಅಜಯ್ ಸೇಠ್‌ ಅವರನ್ನು ಮೆಟ್ರೋ ನಿಗಮಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
ಈ ಮೊದಲು ಮಹೇಂದ್ರ ಜೈನ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು, ಅದಕ್ಕೂ ಮೊದಲು ಪ್ರದೀಪ್‌ ಸಿಂಗ್‌ ಖರೋಲಾ ಅವರು ನಿರ್ದೇಕರಾಗಿದ್ದರು. ಪ್ರದೀಪ್‌ ಸಿಂಗ್‌ ಖರೋಲಾ 2013 ರಿಂದ 2017ರವರೆಗೆ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.
1987ರ  ಬ್ಯಾಚ್  ಐಎಎಸ್ ಅಧಿಕಾರಿಯಾಗಿರುವ ಅಜಯ್ ಸೇಠ್ ಅವರಿಗೆ ಹಣಕಾಸು ವಲಯದಲ್ಲಿ ಅಪಾರ  ಅನುಭವವಿದೆ.  
2017ರಲ್ಲಿ ಏರ್‌ ಇಂಡಿಯಾ ಮುಖ್ಯಸ್ಥರಾಗಿ ವರ್ಗಾವಣೆಗೊಂಡಿದ್ದರು. ಭಾರತೀಯ ವಿಮಾನ ಪ್ರಾಧಿಕಾರದ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಹಣಕಾಸು ಇಲಾಖೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT