ದಾವಣಗೆರೆ: ಉದ್ಯೋಗ ಸೃಷ್ಟಿಗೆ ಮುಖ್ಯಮಂತ್ರಿಗೆ ಮನವಿ ಮಾಡಿ ಯುವಕ ನೇಣಿಗೆ ಶರಣು 
ರಾಜ್ಯ

ದಾವಣಗೆರೆ: ಉದ್ಯೋಗ ಸೃಷ್ಟಿಗೆ ಮುಖ್ಯಮಂತ್ರಿಗೆ ಮನವಿ ಮಾಡಿ ಯುವಕ ನೇಣಿಗೆ ಶರಣು

ರಾಜ್ಯದ ನಿರುದ್ಯೋಗ ಸಮಸ್ಯೆ ನಿವಾರಿಸಿ, ಉದ್ಯೋಗ ಸೃಷ್ಟಿಸಿ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ವಿನಂತಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ....

ದಾವಣಗೆರೆ: ರಾಜ್ಯದ ನಿರುದ್ಯೋಗ ಸಮಸ್ಯೆ ನಿವಾರಿಸಿ,  ಉದ್ಯೋಗ ಸೃಷ್ಟಿಸಿ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ವಿನಂತಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಚನ್ನಗಿರಿ ತಾಲೂಕಿನ ಹೊಸನಗರ ಗ್ರಾಮದ ಅನಿಲ್‌. ಬಿ (22) ಆತ್ಮಹತ್ಯೆಗೆ ಶರಣಾದ ದುರ್ದೈವಿ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಎಂಎ  ಮಾಡುತ್ತಿದ್ದ ಅನಿಲ್‌  ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳು ಯುವಕರಿಗೆ ಉದ್ಯೋಗ ಸೃಷ್ಠಿ  ಮಾಡಬೇಕಿದೆ. ಇದೀಗ ನಿರುದ್ಯೋಗ ಸಮಸ್ಯೆ ಮಿತಿ ಮೀರಿದ್ದು ವಿದ್ಯಾವಂತರು ಕೂಲಿ ಮಾಡುವಂತಾಗಿದೆ. ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ.
ಮೊಬೈಲ್ ಗಳಲ್ಲಿ ಹೇಳಿಕೆ ರೆಕಾರ್ಡ್ ಮಾಡಿಕೊಂಡಿರುವ ಆತ ರಾಜಕಾರಣಿಗಳು ತನ್ನ ಸ್ವಂತದವರಿಗೆ ಮಾತ್ರ ಉದ್ಯೋಗ ನೀಡುತ್ತಿದ್ದಾರೆ.ಗ್ರಾಮೀಣ ಯುವಕರಿಗೆ ಯಾವ ಉದ್ಯೋಗ ದೊರೆಯುತ್ತಿಲ್ಲ. ಸರ್ಕಾರಗಳ ಈ ನಡೆಯಿಂದ ಬೇಸತ್ತು ನಾನು ಸಾವಿಗೆ ಶರಣಾಗುತ್ತಿದ್ದೇನೆ. ಕುಮಾರಸ್ವಾಮಿ ಅವರು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಗ್ರಾಮೀಣ ಪದವೀಧರರಿಗೆ ನ್ಯಾಯ ಸಿಗಬೇಕು.ನಾನೊಬ್ಬ ವಿದ್ಯಾರ್ಥಿಯಾಗಿ, ಬಡ ಕುಟುಂಬದ ವ್ಯಕ್ತಿಯಾಗಿ, ಯುವಕನಾಗಿ ಹಾಗೂ ನಿರುದ್ಯೋಗಿಯಾಗಿ ಸರ್ಕಾರಕ್ಕೆ ನನ್ನ ಸಾವಿನ ಮೂಲಕ ಸಂದೇಶ ನೀಡುತ್ತಿದ್ದೇನೆ.ಇನ್ನಾದರೂ ಉದ್ಯೋಗ ಸೃಷ್ಟಿ ಮಾಡಿ ಬಡತನ ನೀಗಿಸಲಿ ಎಂದು ಹೇಳಿದ್ದಾನೆ.
ಘಟನೆ ಸಂಬಂಧ ಬಸವ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!