ದಾವಣಗೆರೆ: ಉದ್ಯೋಗ ಸೃಷ್ಟಿಗೆ ಮುಖ್ಯಮಂತ್ರಿಗೆ ಮನವಿ ಮಾಡಿ ಯುವಕ ನೇಣಿಗೆ ಶರಣು 
ರಾಜ್ಯ

ದಾವಣಗೆರೆ: ಉದ್ಯೋಗ ಸೃಷ್ಟಿಗೆ ಮುಖ್ಯಮಂತ್ರಿಗೆ ಮನವಿ ಮಾಡಿ ಯುವಕ ನೇಣಿಗೆ ಶರಣು

ರಾಜ್ಯದ ನಿರುದ್ಯೋಗ ಸಮಸ್ಯೆ ನಿವಾರಿಸಿ, ಉದ್ಯೋಗ ಸೃಷ್ಟಿಸಿ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ವಿನಂತಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ....

ದಾವಣಗೆರೆ: ರಾಜ್ಯದ ನಿರುದ್ಯೋಗ ಸಮಸ್ಯೆ ನಿವಾರಿಸಿ,  ಉದ್ಯೋಗ ಸೃಷ್ಟಿಸಿ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ವಿನಂತಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಚನ್ನಗಿರಿ ತಾಲೂಕಿನ ಹೊಸನಗರ ಗ್ರಾಮದ ಅನಿಲ್‌. ಬಿ (22) ಆತ್ಮಹತ್ಯೆಗೆ ಶರಣಾದ ದುರ್ದೈವಿ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಎಂಎ  ಮಾಡುತ್ತಿದ್ದ ಅನಿಲ್‌  ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳು ಯುವಕರಿಗೆ ಉದ್ಯೋಗ ಸೃಷ್ಠಿ  ಮಾಡಬೇಕಿದೆ. ಇದೀಗ ನಿರುದ್ಯೋಗ ಸಮಸ್ಯೆ ಮಿತಿ ಮೀರಿದ್ದು ವಿದ್ಯಾವಂತರು ಕೂಲಿ ಮಾಡುವಂತಾಗಿದೆ. ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ.
ಮೊಬೈಲ್ ಗಳಲ್ಲಿ ಹೇಳಿಕೆ ರೆಕಾರ್ಡ್ ಮಾಡಿಕೊಂಡಿರುವ ಆತ ರಾಜಕಾರಣಿಗಳು ತನ್ನ ಸ್ವಂತದವರಿಗೆ ಮಾತ್ರ ಉದ್ಯೋಗ ನೀಡುತ್ತಿದ್ದಾರೆ.ಗ್ರಾಮೀಣ ಯುವಕರಿಗೆ ಯಾವ ಉದ್ಯೋಗ ದೊರೆಯುತ್ತಿಲ್ಲ. ಸರ್ಕಾರಗಳ ಈ ನಡೆಯಿಂದ ಬೇಸತ್ತು ನಾನು ಸಾವಿಗೆ ಶರಣಾಗುತ್ತಿದ್ದೇನೆ. ಕುಮಾರಸ್ವಾಮಿ ಅವರು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಗ್ರಾಮೀಣ ಪದವೀಧರರಿಗೆ ನ್ಯಾಯ ಸಿಗಬೇಕು.ನಾನೊಬ್ಬ ವಿದ್ಯಾರ್ಥಿಯಾಗಿ, ಬಡ ಕುಟುಂಬದ ವ್ಯಕ್ತಿಯಾಗಿ, ಯುವಕನಾಗಿ ಹಾಗೂ ನಿರುದ್ಯೋಗಿಯಾಗಿ ಸರ್ಕಾರಕ್ಕೆ ನನ್ನ ಸಾವಿನ ಮೂಲಕ ಸಂದೇಶ ನೀಡುತ್ತಿದ್ದೇನೆ.ಇನ್ನಾದರೂ ಉದ್ಯೋಗ ಸೃಷ್ಟಿ ಮಾಡಿ ಬಡತನ ನೀಗಿಸಲಿ ಎಂದು ಹೇಳಿದ್ದಾನೆ.
ಘಟನೆ ಸಂಬಂಧ ಬಸವ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT