ದಾವಣಗೆರೆ: ಉದ್ಯೋಗ ಸೃಷ್ಟಿಗೆ ಮುಖ್ಯಮಂತ್ರಿಗೆ ಮನವಿ ಮಾಡಿ ಯುವಕ ನೇಣಿಗೆ ಶರಣು 
ರಾಜ್ಯ

ದಾವಣಗೆರೆ: ಉದ್ಯೋಗ ಸೃಷ್ಟಿಗೆ ಮುಖ್ಯಮಂತ್ರಿಗೆ ಮನವಿ ಮಾಡಿ ಯುವಕ ನೇಣಿಗೆ ಶರಣು

ರಾಜ್ಯದ ನಿರುದ್ಯೋಗ ಸಮಸ್ಯೆ ನಿವಾರಿಸಿ, ಉದ್ಯೋಗ ಸೃಷ್ಟಿಸಿ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ವಿನಂತಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ....

ದಾವಣಗೆರೆ: ರಾಜ್ಯದ ನಿರುದ್ಯೋಗ ಸಮಸ್ಯೆ ನಿವಾರಿಸಿ,  ಉದ್ಯೋಗ ಸೃಷ್ಟಿಸಿ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ವಿನಂತಿಸಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಚನ್ನಗಿರಿ ತಾಲೂಕಿನ ಹೊಸನಗರ ಗ್ರಾಮದ ಅನಿಲ್‌. ಬಿ (22) ಆತ್ಮಹತ್ಯೆಗೆ ಶರಣಾದ ದುರ್ದೈವಿ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಎಂಎ  ಮಾಡುತ್ತಿದ್ದ ಅನಿಲ್‌  ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳು ಯುವಕರಿಗೆ ಉದ್ಯೋಗ ಸೃಷ್ಠಿ  ಮಾಡಬೇಕಿದೆ. ಇದೀಗ ನಿರುದ್ಯೋಗ ಸಮಸ್ಯೆ ಮಿತಿ ಮೀರಿದ್ದು ವಿದ್ಯಾವಂತರು ಕೂಲಿ ಮಾಡುವಂತಾಗಿದೆ. ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ.
ಮೊಬೈಲ್ ಗಳಲ್ಲಿ ಹೇಳಿಕೆ ರೆಕಾರ್ಡ್ ಮಾಡಿಕೊಂಡಿರುವ ಆತ ರಾಜಕಾರಣಿಗಳು ತನ್ನ ಸ್ವಂತದವರಿಗೆ ಮಾತ್ರ ಉದ್ಯೋಗ ನೀಡುತ್ತಿದ್ದಾರೆ.ಗ್ರಾಮೀಣ ಯುವಕರಿಗೆ ಯಾವ ಉದ್ಯೋಗ ದೊರೆಯುತ್ತಿಲ್ಲ. ಸರ್ಕಾರಗಳ ಈ ನಡೆಯಿಂದ ಬೇಸತ್ತು ನಾನು ಸಾವಿಗೆ ಶರಣಾಗುತ್ತಿದ್ದೇನೆ. ಕುಮಾರಸ್ವಾಮಿ ಅವರು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಗ್ರಾಮೀಣ ಪದವೀಧರರಿಗೆ ನ್ಯಾಯ ಸಿಗಬೇಕು.ನಾನೊಬ್ಬ ವಿದ್ಯಾರ್ಥಿಯಾಗಿ, ಬಡ ಕುಟುಂಬದ ವ್ಯಕ್ತಿಯಾಗಿ, ಯುವಕನಾಗಿ ಹಾಗೂ ನಿರುದ್ಯೋಗಿಯಾಗಿ ಸರ್ಕಾರಕ್ಕೆ ನನ್ನ ಸಾವಿನ ಮೂಲಕ ಸಂದೇಶ ನೀಡುತ್ತಿದ್ದೇನೆ.ಇನ್ನಾದರೂ ಉದ್ಯೋಗ ಸೃಷ್ಟಿ ಮಾಡಿ ಬಡತನ ನೀಗಿಸಲಿ ಎಂದು ಹೇಳಿದ್ದಾನೆ.
ಘಟನೆ ಸಂಬಂಧ ಬಸವ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT