ಸಾಂದರ್ಭಿಕ ಚಿತ್ರ 
ರಾಜ್ಯ

ಕೈಲಾಸ ಮಾನಸ ಯಾತ್ರೆ, ಕರ್ನಾಟಕದ ಯಾತ್ರಾರ್ಥಿಗಳು ಸುರಕ್ಷಿತ- ಮಾಹಿತಿ

ನೇಪಾಳದಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಕೈಲಾಸ ಮಾನಸ ಸರೋವರಕ್ಕೆ ತೆರಳಿದ್ದ ರಾಜ್ಯದ ಯಾತ್ರಾರ್ಥಿಗಳು ಸುರಕ್ಷಿತವಾಗಿರುವುದಾಗಿ ತಿಳಿದುಬಂದಿದೆ.

ಬೆಂಗಳೂರು: ನೇಪಾಳದಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಕೈಲಾಸ ಮಾನಸ  ಸರೋವರಕ್ಕೆ ತೆರಳಿದ್ದ ರಾಜ್ಯದ ಯಾತ್ರಾರ್ಥಿಗಳು ಮಾರ್ಗಮಧ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದು ಆತಂಕಕ್ಕೆ ಕಾರಣವಾಗಿತ್ತು. ಆದರೆ, ಕರ್ನಾಟಕದ 13 ಯಾತ್ರಾರ್ಥಿಗಳ ಗುಂಪಿನ ಕೆಲವರು  ಕುಟುಂಬದವರೊಂದಿಗೆ ಸಂಪರ್ಕಕ್ಕೆ ಸಿಕ್ಕಿದ್ದು,ಅವರೆಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿದುಬಂದಿದೆ.

ಮಾನಸ ಸರೋವರ ಮಾರ್ಗದಲ್ಲಿನ ನೇಪಾಳ ಮತ್ತು ಟಿಬೆಟ್  ಮಧ್ಯದಲ್ಲಿಯೇ ಕೆಲ ಯಾತ್ರಾರ್ಥಿಗಳು   ಮಳೆಯಿಂದಾಗಿ  ಯಾವುದೇ ಸಂಪರ್ಕಕ್ಕೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಪೈಕಿ  ಗೋಕಾಕ್ ನಿಂದ ತೆರಳಿದ ಲೀಲಾ ಮತ್ತು ಆಕೆಯ ಸ್ನೇಹಿತೆ ಬೈಲಹೊಂಗಲದ ಗೀತಾ ಹೊಸಮಠ್, ಸೋಮವಾರ ಬೆಳಗ್ಗೆಯಿಂದ ಕುಟುಂಬದವರೊಂದಿಗೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದಾಗಿ ಕುಟುಂಬ ಸದಸ್ಯರು ಆತಂಕಕ್ಕೊಳಗಾಗಿದ್ದರು.

 ಆದಾಗ್ಯೂ, ಗೀತಾ ಇಂದು ಕರೆ ಮಾಡಿದ್ದು, ಹಿಂದಿರುಗಿ ಬರುತ್ತಿರುವುದಾಗಿ ಹೇಳಿರುವುದರಿಂದ ಅವರ ಕುಟುಂಬ ಸದಸ್ಯರ ಆತಂಕ ಸ್ವಲ್ಪ ಮಟ್ಟಿಗೆ ತಗ್ಗಿದಂತಾಗಿದೆ.   ನಳಿನಿ ನೇತೃತ್ವದಲ್ಲಿನ 13 ಜನರ ಗುಂಪು  ಸುರಕ್ಷಿತವಾಗಿದ್ದು, ಶೀಘ್ರದಲ್ಲಿಯೇ ಕಠ್ಮುಂಡು ತಲುಪಲಿದ್ದೇವೆ. ಜುಲೈ 5 ರಂದು ಸ್ಪಗ್ರಾಮಕ್ಕೆ  ಬರುವುದಾಗಿ ಗೀತಾ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT