ವಿಧಾನಸೌಧದ ಬಳಿ ಮಹದಾಯಿ ಹೋರಾಟ ಸಮಿತಿಯ ಸದಸ್ಯರೊಂದಿಗೆ ಮಾತನಾಡುತ್ತಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಮಹದಾಯಿ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ಇನ್ನೂ ಮರೀಚಿಕೆ!

ಮೂರು ದಶಕಗಳ ಹಳೆಯ ಉತ್ತರ ಕರ್ನಾಟಕದ ಮಹದಾಯಿ ನದಿ ನೀರು ಹೋರಾಟದಲ್ಲಿ ಪ್ರಾಣವನ್ನು ...

ಬೆಂಗಳೂರು: ಮೂರು ದಶಕಗಳ ಹಳೆಯ ಉತ್ತರ ಕರ್ನಾಟಕದ ಮಹದಾಯಿ ನದಿ ನೀರು ಹೋರಾಟದಲ್ಲಿ ಪ್ರಾಣವನ್ನು ಕಳೆದುಕೊಂಡ 10 ಮಂದಿ ರೈತರಲ್ಲಿ 7 ರೈತರ ಕುಟುಂಬಗಳಿಗೆ ಇನ್ನೂ ರಾಜ್ಯ ಸರ್ಕಾರದಿಂದ ಸಂಪೂರ್ಣ 5 ಲಕ್ಷ ರೂಪಾಯಿ ಪರಿಹಾರ ಮೊತ್ತ ಸಿಕ್ಕಿಲ್ಲ ಎಂದು ಕರ್ನಾಟಕ ರೈತ ಸೇನೆ ಆರೋಪಿಸಿದೆ.

ಮಹದಾಯಿ ನದಿ ನೀರಿಗೆ ಸಂಬಂಧಪಟ್ಟಂತೆ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಪೈಕಿ ಮೂವರ ಕುಟುಂಬದವರಿಗೆ ಮಾತ್ರ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಪರಿಹಾರ ಸಿಕ್ಕಿದೆ. ಉಳಿದ ಏಳು ಕುಟುಂಬಗಳ ಸದಸ್ಯರಿಗೆ ಕೇವಲ ಎರಡೂವರೆ ಲಕ್ಷ ರೂಪಾಯಿ ಮಾತ್ರ ಪರಿಹಾರ ಸಿಕ್ಕಿದೆಯಷ್ಟೆ ಎಂದು ರೈತಸೇನೆಯ ರಾಜ್ಯಾಧ್ಯಕ್ಷ ವೀರೇಶ್ ಸೊಬರದ್ ಮಠ್ ಆರೋಪಿಸಿದ್ದಾರೆ.

ಈ ಕುರಿತು ಅವರು ನಿನ್ನೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ  ಮನವಿ ಸಲ್ಲಿಸಿದರು. ವಿಧಾನಸೌಧದ ಬಳಿ ನಿನ್ನೆ ಧರಣಿ ನಡೆಸುತ್ತಿದ್ದ ರೈತಸೇನೆಯ ಸದಸ್ಯರನ್ನು ಖುದ್ದು ಮುಖ್ಯಮಂತ್ರಿಗಳೇ ಭೇಟಿ ಮಾಡಿದ್ದರು.

ರೈತ ಕುಟುಂಬಗಳಿಗೆ ಶೀಘ್ರವೇ ಬಾಕಿ ಪರಿಹಾರವನ್ನು ಬಿಡುಗಡೆ ಮಾಡುವಂತೆ ರೈತ ಸೇನೆ ಸದಸ್ಯರು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದರು. ರೈತರ ಸಂಪೂರ್ಣ ಸಾಲಮನ್ನಾ, ರೈತರ ಮಕ್ಕಳಿಗೆ ಶೈಕ್ಷಣಿಕ ಸಾಲ, ರಾಜ್ಯಾದ್ಯಂತ ಕನಿಷ್ಠ ಬೆಂಬಲ ಬೆಲೆ ಮತ್ತು ಸಂಗ್ರಹಣಾ ಕೇಂದ್ರಗಳ ಸ್ಥಾಪನೆ ಬಗ್ಗೆ ಕೂಡ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದರು. ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎಂದು ಸೊಬರದ್ ಮಠ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT