ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿಗೆ ರೂ.559 ಕೋಟಿ ನಷ್ಟ: ದೇವೇಗೌಡ ಕುಟುಂಬದ ವಿರುದ್ಧ ಆಸ್ತಿ ತೆರಿಗೆ ವಂಚನೆ ಆರೋಪ

ಬಿಬಿಎಂಪಿ ವ್ಯಾಪ್ತಿಯ 63 ಕಟ್ಟಡಗಳ ಮಾಲೀಕರು ಪಾಲಿಕೆ ಅಧಿಕಾರಿಗಳಿಗೆ ಸುಳ್ಳು ಆಸ್ತಿ ಘೋಷಣೆಮಾಡಿಕೊಂಡು ಹಲವು ವರ್ಷಗಳಿಂದ ಬರೋಬ್ಬರಿ ರೂ.559 ಕೋಟಿ ನಷ್ಟು ಆಸ್ತಿ ತೆರಿಗೆ ವಂಚನೆ ಮಾಡಿದ್ದು, ಇದರಲ್ಲಿ ಮಾಜಿ ಪ್ರಧಾನಮಂತ್ರಿ ದೇವೇಗೌಡ...

ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯ 63 ಕಟ್ಟಡಗಳ ಮಾಲೀಕರು ಪಾಲಿಕೆ ಅಧಿಕಾರಿಗಳಿಗೆ ಸುಳ್ಳು ಆಸ್ತಿ ಘೋಷಣೆಮಾಡಿಕೊಂಡು ಹಲವು ವರ್ಷಗಳಿಂದ ಬರೋಬ್ಬರಿ ರೂ.559 ಕೋಟಿ ನಷ್ಟು ಆಸ್ತಿ ತೆರಿಗೆ ವಂಚನೆ ಮಾಡಿದ್ದು, ಇದರಲ್ಲಿ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ಕುಟುಂಬ ಸದಸ್ಯರಿಗೆ ಸೇರಿದ ಆಸ್ತಿಗಳಿವೆ ಎಂಬ ಆರೋಪಗಳೂ ಕೂಡ ಕೇಳಿ ಬಂದಿವೆ.
ಪಾಲಿಕೆ ವ್ಯಾಪ್ತಿಯಲ್ಲಿ 77ಕ್ಕೂ ಅಧಿಕ ಟೆಕ್ ಪಾರ್ಕ್ ಗಳು, 51 ಮಾಲ್ ಗಳು, 4,834 ಕೈಗಾರಿಕೆಗಳು ಮತ್ತು ಸಾವಿರಾರು ವಸತಿ ಸಂಕೀರ್ಣಗಳಿವೆ. ಆಸ್ತಿಗಳ ಮಾಲೀಕರು 2008ರಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ (ಎಸ್ಎಎಸ್) ತಮ್ಮ ಕಟ್ಟಡಗಳ ಅಳತೆಯನ್ನು ತಪ್ಪಾಗಿ ಘೋಷಿಸಿಕೊಂಡು ತೆರಿಗೆ ವಂಚಿಸುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಮೊದಲ ಹಂತದಲ್ಲಿ ಮಾಲ್ ಗಳು ಹಾಗೂ ಟೆಕ್ ಪಾರ್ಕ್ ಕಟ್ಟಡಗಳ ನಿಖರ ವಿಸ್ತೀರ್ಣ ಪತ್ತೆಗಾಗಿ ಟೋಟಲ್ ಸ್ಟೇಷನ್ ಸರ್ವೆ ಕಾರ್ಯ ಕೈಗೊಳ್ಳಲಾಗಿದೆ. 
ಮಹದೇವಪುರ ವಲಯದ ವ್ಯಾಪ್ತಿಯಲ್ಲಿ ಬೆಳ್ಳಂದೂರು ಸಮೀಪದಲ್ಲಿರುವ ಆರ್'ಎಂಝಡ್ ಸೆಂಟೆನೇಲ್ ಕಟ್ಟಡದ ಸುಳ್ಳು ಆಸ್ತಿ ಘೋಷಣೆ ಮಾಡಿಕೊಂಡು ಕಳೆದ 10 ವರ್ಷದಲ್ಲಿ ರೂ.3.17 ಕೋಟಿ ಬಿಬಿಎಂಪಿಗೆ ಆಸ್ತಿ ತೆರಿಗೆ ವಂಚನೆ ಮಾಡಲಾಗಿದೆ ಎಂಬುದು ತಿಳಿದುಬಂದಿದೆ. 
ಆರ್'ಎಂಝಡ್ ಸೆಂಟೆನೇಲ್ ಕಟ್ಟಡ ಮಾಜಿ ಪ್ರಧಾನಿ ದೇವೇಗೌಡ ಕುಟುಂಬ ಸದಸ್ಯರಿಗೆ ಸೇರಿದ್ದಾಗಿದೆ. ದೇವೇಗೌಡರ ಸೊಸೆಯಂದಿರಾದ ಹೆಚ್.ಕವಿತಾ ರೂ.55, 21, 479, ಭವಾನಿ ರೇವಣ್ಣ ರೂ.41,79,440, ಅನಿತಾ ಕುಮಾರಸ್ವಾಮಿ ರೂ.54,85,521, ಮಕ್ಕಳಾದ ಹೆಚ್.ಡಿ.ಶೈಲಾ ರೂ.55,21,479, ಹೆಚ್.ಡಿ.ಅನುಸೂಯ ರೂ.55,21,479, ಪುತ್ರ ಹೆಚ್.ಡಿ. ರಮೇಶ್ ರೂ.55,21,389 ಸುಳ್ಳು ಆಸ್ತಿ ಘೋಷಣೆಯಿಂದ ಆಸ್ತಿ ತೆರಿಗೆ ವಂಚನೆ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT