ಬೆಂಗಳೂರು: ಬ್ಲೇಡ್ ನಿಂದ ಬಾಲಕನ ಕತ್ತು ಸೀಳಿದ ಅಂಗನವಾಡಿ ಶಿಕ್ಷಕಿ! 
ರಾಜ್ಯ

ಬೆಂಗಳೂರು: ಬ್ಲೇಡ್ ನಿಂದ ಬಾಲಕನ ಕತ್ತು ಸೀಳಿದ ಅಂಗನವಾಡಿ ಶಿಕ್ಷಕಿ!

ಕ್ಷುಲ್ಲಕ ಕಾರಣಕ್ಕಾಗಿ ಅಂಗನವಾಡಿ ಶಿಕ್ಷಕಿಯೊಬ್ಬರು ಏಳು ವರ್ಷದ ಬಾಲಕನ ಕತ್ತನ್ನು ಬ್ಲೇಡಿನಿಂದ ಕೊಯ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಅಂಗನವಾಡಿ ಶಿಕ್ಷಕಿಯೊಬ್ಬರು ಏಳು ವರ್ಷದ ಬಾಲಕನ ಕತ್ತನ್ನು ಬ್ಲೇಡಿನಿಂದ ಸೀಳಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ  ಕಾಸಘಟ್ಟ ಅಂಗನವಾಡಿ ಕೇಂದ್ರದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು ಅದೇ ಗ್ರಾಮದ ನಿವಾಸಿ ಪೃಥ್ವಿರಾಜ್(7)  ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಂಗನವಾಡಿ ಶಿಕ್ಷಕಿ ಮುನಿರತ್ನಮ್ಮ ಎನ್ನುವವರು ಈ ಕೃತ್ಯ ಎಸಗಿದ್ದು ಬಾಲಕ ಪ್ರಥ್ವಿರಾಜ್ ತನ್ನ ಮೊಮ್ಮಗನೊಂದಿಗೆ ಜಗಳವಾಡಿದ್ದನೆನ್ನುವ ಕಾರಣಕ್ಕೆ ಅವನ ಮೇಲೆ ಬ್ಲೇಡಿನಿಂದ ಹಲ್ಲೆ ನಡೆಸಿದ್ದಾ:ಳೆ. ಆಕೆ ಹುಡುಗನನ್ನು ಥಳಿಸಿದ್ದಳಲ್ಲದೆ ಬ್ಲೇಡ್ ನಿಂದ ಆತನ ಕುತ್ತಿಗೆ ಕುಯ್ದಿದ್ದಾಳೆ.
ಸಧ್ಯ ಗಾಯಾಳು ಬಾಲಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಶಿಕ್ಷಕಿ ವಿರುದ್ಧ ಬಾಲಕನ ಪೋಷಕರು ದೊಡ್ಡಬೆಳವಂಗಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2047 ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ: ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ- ರಾಷ್ಟ್ರಪತಿ

ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: ಓರ್ವ ಆರೋಪಿ ಹೈದರಾಬಾದ್ ನಿವಾಸಿ; ಸ್ಫೋಟಕ ಮಾಹಿತಿ ಹಂಚಿಕೊಂಡ ತೆಲಂಗಾಣ ಪೊಲೀಸರು!

hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪರು': ಬಿಹಾರ ಮುಸ್ಲಿಂ ಸಚಿವರ ಸ್ಪಷ್ಟನೆ

ದರ್ಶನ್ ಕೈಹಿಡಿತ ಡೆವಿಲ್: 6 ದಿನದಲ್ಲಿ ಒಟ್ಟು 25 ಕೋಟಿ ಕಲೆಕ್ಷನ್, ಸಿನಿಮಾ ಸೋಲ್ತಾ? ಗೆಲ್ತಾ?

SIR: 'ದಾಖಲೆಗಳಲ್ಲೇಕೆ.. ನಿಜವಾಗಿಯೂ ಕೊಂದು ಬಿಡಿ.. ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಿ': 'ಮೃತ' TMC ಕೌನ್ಸಿಲರ್ ಗೋಳು

SCROLL FOR NEXT