ಗೌರಿ ಲಂಕೇಶ್ 
ರಾಜ್ಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್ ಗೆ ಟ್ವಿಸ್ಟ್: ಪ್ರಕರಣದಲ್ಲಿ ನಿವೃತ್ತ ಕರ್ನಲ್ ಕೈವಾಡ?

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಕರಣದಲ್ಲಿ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅವರ ಪಾತ್ರ ಇದೆ ಎಂಬುದಾಗಿ ಶಂಕೆ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು:  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಕರಣದಲ್ಲಿ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅವರ ಪಾತ್ರ ಇದೆ ಎಂಬುದಾಗಿ ಶಂಕೆ ವ್ಯಕ್ತ ಪಡಿಸಿದ್ದಾರೆ.
ಬಲಪಂಥೀಯ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ನಿವೃತ್ತ ಕರ್ನಲ್  ಅವರ ಕೈವಾಡವಿರುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಈ ಸಂಬಂಧ ಸಾಕ್ಷಿ ಕಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಮಾಡಿದೆ.
ಗೌರಿ ಹತ್ಯೆ ಮಾಡಲು ಅಮೋಲ್ ಕಾಳೆಗೆ 4 ಮಂದಿ ಆದೇಶ ನೀಡಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಗೌರಿ ಲಂಕೇಶ್ ಅವರ ವಿಡಿಯೋ ಕೂಡ ಆರೋಪಿಗೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಮಂದಿ ಪ್ರಮುಖರು ಗೌರಿ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಎಸ್ ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಾಲ್ವರು ಬಲ ಪಂಥೀಯ ಸಂಘಟನೆಯಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದು ಅದರಲ್ಲಿ ನಿವೃತ್ತಕರ್ನಲ್  ಒಬ್ಬರು ಸೇರಿದ್ದಾರೆ.
ಅವರು ಗೌರಿ ಹತ್ಯೆಗೆ ಕರೆ ನೀಡಿದ್ದಾರೆ, ಆದರೆ ಅವರ ವಿರುದ್ಧ ಸರಿಯಾದ ಸಾಕ್ಷಿಗಳಿಲ್ಲ, ಸಾಕ್ಷಿಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ, ತಪ್ಪಿತಸ್ಥರನ್ನು ರಕ್ಷಿಸಲು ಸಂಘಟನೆ ಪ್ರಯತ್ನಿಸುತ್ತಿದೆ. ಸುಮಾರು ಮೂವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ, ಆರೋಪಿಗಳು ಬಂಧನದಿಂದ ತಪ್ಪಿಸಿಕೊಳ್ಳಲು ಸಂಘಟನೆ ಅವರಿಗೆ ಹಣಕಾಸಿನ ನೆರವು ನೀಡುತ್ತಿದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.
ಈ ಮೊದಲು ಅಮೋಲ್ ಕಾಳೆ ಗೌರಿ ಲಂಕೇಶ್ ಹತ್ಯೆಗೆ ಯೋಜಿಸಿದ್ದಾಗಿ ತನಿಖೆ ಮಾಡಲಾಗಿತ್ತು. ಆದರೆ ಆತ ಇತರ ಸಂಚುಗಾರರ ಆದೇಶದಂತೆ ಕೊಲೆ ಮಾಡಿದ್ದಾನೆ ಎಂಬ ದಿಕ್ಕಿನಲ್ಲಿ ತನಿಖೆ ನಡೆಯುತ್ತಿದೆ.
ಕೊಲೆ ಪ್ರಕರಣಕ್ಕೆ ಅಗತ್ಯವಾದ ಹಣಕಾಸಿನ ನೆರವನ್ನು ಬಲಪಂಥೀಯ ಸಂಘಟನೆಯೊಂದು ನೀಡಿದೆ, ಗೌರಿ ಲಂಕೇಶ್ ಹತ್ಯೆಗೆ ಯೋಜನೆ ರೂಪಿಸಿದಾಗಿನಿಂದ ಅಂದರೇ 2017ರ ಜನವರಿಯಿಂದಲೂ ಪ್ರತಿ ತಿಂಗಳು ಆತನಿಗೆ 1.25ಲಕ್ಷ ಹಣ ನೀಡಲಾಗಿದೆ, ಈ ಹಣವನ್ನು ಬಲ ಪಂಥೀಯ ಸಂಘಟನೆ ನೀಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಯತ್ತ ನುಗ್ಗಿದ 'ಪಾಕ್ ಡ್ರೋನ್' ಗಳು!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT