ಗೌರಿ ಲಂಕೇಶ್ 
ರಾಜ್ಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್ ಗೆ ಟ್ವಿಸ್ಟ್: ಪ್ರಕರಣದಲ್ಲಿ ನಿವೃತ್ತ ಕರ್ನಲ್ ಕೈವಾಡ?

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಕರಣದಲ್ಲಿ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅವರ ಪಾತ್ರ ಇದೆ ಎಂಬುದಾಗಿ ಶಂಕೆ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು:  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಕರಣದಲ್ಲಿ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅವರ ಪಾತ್ರ ಇದೆ ಎಂಬುದಾಗಿ ಶಂಕೆ ವ್ಯಕ್ತ ಪಡಿಸಿದ್ದಾರೆ.
ಬಲಪಂಥೀಯ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ನಿವೃತ್ತ ಕರ್ನಲ್  ಅವರ ಕೈವಾಡವಿರುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಈ ಸಂಬಂಧ ಸಾಕ್ಷಿ ಕಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಮಾಡಿದೆ.
ಗೌರಿ ಹತ್ಯೆ ಮಾಡಲು ಅಮೋಲ್ ಕಾಳೆಗೆ 4 ಮಂದಿ ಆದೇಶ ನೀಡಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಗೌರಿ ಲಂಕೇಶ್ ಅವರ ವಿಡಿಯೋ ಕೂಡ ಆರೋಪಿಗೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಮಂದಿ ಪ್ರಮುಖರು ಗೌರಿ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಎಸ್ ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಾಲ್ವರು ಬಲ ಪಂಥೀಯ ಸಂಘಟನೆಯಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದು ಅದರಲ್ಲಿ ನಿವೃತ್ತಕರ್ನಲ್  ಒಬ್ಬರು ಸೇರಿದ್ದಾರೆ.
ಅವರು ಗೌರಿ ಹತ್ಯೆಗೆ ಕರೆ ನೀಡಿದ್ದಾರೆ, ಆದರೆ ಅವರ ವಿರುದ್ಧ ಸರಿಯಾದ ಸಾಕ್ಷಿಗಳಿಲ್ಲ, ಸಾಕ್ಷಿಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ, ತಪ್ಪಿತಸ್ಥರನ್ನು ರಕ್ಷಿಸಲು ಸಂಘಟನೆ ಪ್ರಯತ್ನಿಸುತ್ತಿದೆ. ಸುಮಾರು ಮೂವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ, ಆರೋಪಿಗಳು ಬಂಧನದಿಂದ ತಪ್ಪಿಸಿಕೊಳ್ಳಲು ಸಂಘಟನೆ ಅವರಿಗೆ ಹಣಕಾಸಿನ ನೆರವು ನೀಡುತ್ತಿದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.
ಈ ಮೊದಲು ಅಮೋಲ್ ಕಾಳೆ ಗೌರಿ ಲಂಕೇಶ್ ಹತ್ಯೆಗೆ ಯೋಜಿಸಿದ್ದಾಗಿ ತನಿಖೆ ಮಾಡಲಾಗಿತ್ತು. ಆದರೆ ಆತ ಇತರ ಸಂಚುಗಾರರ ಆದೇಶದಂತೆ ಕೊಲೆ ಮಾಡಿದ್ದಾನೆ ಎಂಬ ದಿಕ್ಕಿನಲ್ಲಿ ತನಿಖೆ ನಡೆಯುತ್ತಿದೆ.
ಕೊಲೆ ಪ್ರಕರಣಕ್ಕೆ ಅಗತ್ಯವಾದ ಹಣಕಾಸಿನ ನೆರವನ್ನು ಬಲಪಂಥೀಯ ಸಂಘಟನೆಯೊಂದು ನೀಡಿದೆ, ಗೌರಿ ಲಂಕೇಶ್ ಹತ್ಯೆಗೆ ಯೋಜನೆ ರೂಪಿಸಿದಾಗಿನಿಂದ ಅಂದರೇ 2017ರ ಜನವರಿಯಿಂದಲೂ ಪ್ರತಿ ತಿಂಗಳು ಆತನಿಗೆ 1.25ಲಕ್ಷ ಹಣ ನೀಡಲಾಗಿದೆ, ಈ ಹಣವನ್ನು ಬಲ ಪಂಥೀಯ ಸಂಘಟನೆ ನೀಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT