ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ 
ರಾಜ್ಯ

ಶಿಷ್ಯ ಸ್ವೀಕಾರ ಮಾಡದ ಶಿರೂರು ಶ್ರೀಗಳಿಗೆ ಪಟ್ಟದ ದೇವರ ಹಸ್ತಾಂತರವಿಲ್ಲ: ಅಷ್ಟ ಮಠಾಧೀಶರ ಮಹತ್ವದ ನಿರ್ಧಾರ

ಉಡುಪಿ ಅಷ್ಟಮಠಾಧೀಶರ ನಡುವೆ ಶೀತಲ ಸಮರ ಬಹು ಹಿಂದಿನಿಂದಲೂ ನಡೆಯುತ್ತಿದ್ದು ಇದೀಗ ಶಿರೂರು ಶ್ರೀಗಳ ಶಿಷ್ಯ ಸ್ವೀಕಾರ ವಿಚಾರದಲ್ಲಿ ಇದು ಇನ್ನೊಮ್ಮೆ ಮುನ್ನೆಲೆಗೆ ಬಂದಿದೆ.

ಉಡುಪಿ: ಉಡುಪಿ ಅಷ್ಟಮಠಾಧೀಶರ ನಡುವೆ ಶೀತಲ ಸಮರ ಬಹು ಹಿಂದಿನಿಂದಲೂ ನಡೆಯುತ್ತಿದ್ದು ಇದೀಗ ಶಿರೂರು ಶ್ರೀಗಳ ಶಿಷ್ಯ ಸ್ವೀಕಾರ ವಿಚಾರದಲ್ಲಿ ಇದು ಇನ್ನೊಮ್ಮೆ ಮುನ್ನೆಲೆಗೆ ಬಂದಿದೆ. ಶಿಷ್ಯ ಸ್ವೀಕಾರ ಮಾಡದ ಶ್ರೀಗಳಿಗೆ ಅವರ ಪಟ್ಟದ ದೇವರನ್ನು ಹಸ್ತಾಂತರಿಸದಿರಲು ಉಳಿದ ಮಠಾಧೀಶರು ನಿರ್ಧರಿಸಿದ್ದಾರೆ.
ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಷ್ಟ ಮಠದ ಮಠಾಧಿಶರು ಪಾಲಿಸಬೇಕಾದ ನಿಯಮ ಪಾಲನೆ ಮಾಡುತ್ತಿಲ್ಲ ಎನ್ನುವ ಆರೋಪವಿದ್ದು ಇದೆಲ್ಲದರ ನಡುವೆಯೇ ಶ್ರೀಗಳಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಆ ಸಮಯ ಅವರು ನಿತ್ಯವೂ ಪೂಜಿಸುವ ಪಟ್ಟದ ದೇವರನ್ನು ಅದಮಾರು ಮಠದ ಕಿರಿಯ ಶ್ರೀಗಳಿಗೆ ಹಸ್ತಾಂತರಿಸಲಾಗಿತ್ತು. ಇದೀಗ ಚೇತರಿಸಿಕೊಂಡಿರುವ ಶ್ರೀಗಳಿಗೆ ಮತ್ತೆ ಪಟ್ಟದ ದೇವರನ್ನು ಹಸ್ತಾಂತರಿಸಲು ಅವರು ಶಿಷ್ಯ ಸ್ವೀಕಾರ ಮಾಡುವಂತೆ ಷರತ್ತು ಹಾಕಲಾಗಿದೆ.
ಈ ನಡುವೆ "ತಾನು ಚೇತರಿಸಿಕೊಂಡಿದ್ದು ಪಟ್ಟದ ದೇವರನ್ನು ಮರಳಿ ಕೇಳುತ್ತಿದ್ದೇನೆ.ಹಾಗೊಮ್ಮೆ ಕೊಡಲು ಒಪ್ಪದೆ ಹೋದಲ್ಲಿ ಕಾನೂನು ಹೋರಾಟ ನಡೆಸಲಾಗುತ್ತದೆ" ಎಂದು ಶಿರೂರು ಶ್ರೀಗಳು ಹೇಳಿದ್ದಾರೆ.
ಶಿಷ್ಯ ಸ್ವೀಕಾರ ವಿಚಾರವನ್ನು ಮುಂದೆ ಗಮನಿಸುತ್ತೇನೆ ಎಂದಿರುವ ಶ್ರೀಗಳಿಗೆ ಅವರು ಶಿಷ್ಯ ಸ್ವೀಕಾರ ಮಾಡುವವರೆಗೆ ದೇವರನ್ನು ಹಸ್ತಾಂತರಿಸದೆ ಇರಲು ಮಠಾಧೀಶರು ತೀರ್ಮಾನಿಸಿದ್ದಾರೆ. ಅಲಿಯವರೆಗೆ ಪಟ್ಟದ ದೇವರಿಗೆ ಕೃಷ್ಣಮಠದಲ್ಲಿಯೇ ಪೂಜೆ ನಡೆಯಲಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಜಕೀಯಕ್ಕೆ ಧುಮುಕಲು ಮುಂದಾಗಿದ್ದ ಶಿರೂರು ಶ್ರೀಗಳು ಕಡೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದಿದ್ದರು. ಆ ವೇಳೆಯಲ್ಲಿಯೇ ಸ್ವಾಮೀಜಿಯ ಶಿಷ್ಯ ಸ್ವೀಕಾರದ ಕುರಿತು ಚರ್ಚೆ ಆರಂಭವಾಗಿತ್ತು ಇದೀಗ ಮತ್ತೆ ಚರ್ಚೆ ಮುನ್ನಲೆಗೆ ಬಂದಿದ್ದು ಸ್ವಾಮೀಜಿ ಕಡ್ಡಾಯವಾಗಿ ಶಿಷ್ಯ ಸ್ವೀಕಾರ ಮಾಡಬೇಕೆಂಬ ವಿಚಾರಕ್ಕೆ ಮತ್ತೆ ಜೀವ ಬಂದಿದೆ.
ಪರ್ಯಾಯ ಸ್ವೀಕರಿಸುವ ಶ್ರೀಗಳೇ ಪಟ್ಟದ ದೇವರ ಪೂಜೆ ಮಾಡಬೇಕೆನ್ನುವುದು ಅಷ್ಟಮಠಗಳ ನಿಯಮವಾಗಿದ್ದು ಒಂದು ವೇಳೆ ಶ್ರೀಗಳಿಗೆ ಅನಾರೋಗ್ಯವಾದರೆ ಅವರ ಶಿಷ್ಯ ದೇವರ ಪೂಜೆ ನೆರವೇರಿಸಬೇಕಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!