ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯ ರವಾನೆ 
ರಾಜ್ಯ

ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯ ರವಾನೆ

ಝೀರೋ ಟ್ರಾಫಿಕ್ ವ್ಯವಸ್ಥೆ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯವೊಂದನ್ನು ರವಾನಿಸಲಾಗಿದೆ...

ಮೈಸೂರು; ಝೀರೋ ಟ್ರಾಫಿಕ್ ವ್ಯವಸ್ಥೆ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯವೊಂದನ್ನು ರವಾನಿಸಲಾಗಿದೆ. 
ಕೆಲ ದಿನಗಳ ಹಿಂದಷ್ಟೇ ಚಾಮುಂಡಿ ಬೆಟ್ಟದಲ್ಲಿ ಅಪಘಾತವೊಂದು ಸಂಭವಿಸಿತ್ತು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕ ಮತ್ತು ಯುವತಿ ಅಪಘಾತಕ್ಕೀಡಾಗಿದ್ದರು. ಘಟನೆಯಲ್ಲಿ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ಹಿಂದೆ ಕುಳಿತಿದ್ದ ಯುವತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಳು. ಯುವತಿ ಕೋಮಾಗೆ ಹೋಗಿದ್ದು, ಬದುಕುಳಿಯುವುದು ಕಷ್ಟ ಎಂದು ವೈದ್ಯರು ಕೈಚೆಲ್ಲಿದ್ದರು. ಈ ಹಿನ್ನಲೆಯಲ್ಲಿ ಕುಟುಂಬಸ್ಥರು ಯುವತಿಯ ಹೃದಯವನ್ನು ದಾನ ಮಾಡಲು ಒಪ್ಪಿದ್ದರು. 
ಇದರಂತೆ ಯುವತಿಯ ಪೋಷಕರ ಒಪ್ಪಿಗೆ ಮೇರೆಗೆ ಶಸ್ತ್ರಚಿಕಿತ್ಸೆ ಮೂಲಕ ಜೀವಂತ ಹೃದಯವನ್ನು ಮೈಸೂರಿನ ಅರೋಲೋ ಆಸ್ಪತ್ರೆಯಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಪೊಲೀಸರ ಸಹಕಾರದೊಂದಿಗೆ ಆ್ಯಂಬ್ಯುಲೆನ್ಸ್ ನಲ್ಲಿ ಹೃದಯವನ್ನು ರವಾನೆ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT