ಉಚಿತ ಬಸ್ ಪಾಸ್'ಗಾಗಿ ಪ್ರತಿಭಟನೆ: ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತ ಮೇಲೆ ಲಾಠಿ ಚಾರ್ಜ್
ತುಮಕೂರು; ಉಚಿತ ಬಸ್ ಪಾಸ್ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಎಬಿವಿಬಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಶನಿವಾರ ನಡೆದಿದೆ.
ಉಚಿತ ಬಸ್ ಆಗ್ರಹಿಸಿ ತುಮಕೂರಿನ ಶಿವಕುಮಾರ ಸ್ವಾಮೀಜಿ ಮೃತ್ತದಲ್ಲಿ ರಸ್ತೆ ತಡೆ ನಡೆಸಲು ಮುಂದಾಗಿದ್ದ ಪ್ರತಿಭಟನಿರತ ವಿದ್ಯಾರ್ಥಿಗಳನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆಂದು ತಿಳಿದುಬಂದಿದೆ.
ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದರು. ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಲಾಠಿ ಚಾರ್ಜ್ ನಡೆಸಿದ ಪರಿಣಾಮ ಕೆಲ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos