ಬೆಂಗಳೂರು: ನೆಟ್ ಪರೀಕ್ಷಾರ್ಥಿಗಳ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ, ಧಾರ್ಮಿಕ ಭಾವನೆಗೆ ಧಕ್ಕೆ, 
ರಾಜ್ಯ

ಬೆಂಗಳೂರು: ನೆಟ್ ಪರೀಕ್ಷಾರ್ಥಿಗಳ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ, ಧಾರ್ಮಿಕ ಭಾವನೆಗೆ ಧಕ್ಕೆ,

ಪರೀಕ್ಷೆ ಬರೆಯಬಯಸುವ ವಿವಾಹಿತ ಮಹಿಳೆಯರು ಮಾಂಗಲ್ಯ ಸರ, ಕಾಲುಂಗುರ ಕಳಚಿಡಬೇಕು ಇಲ್ಲವಾದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಹೇಳಿ.....

ಬೆಂಗಳೂರು: ಪರೀಕ್ಷೆ ಬರೆಯಬಯಸುವ ವಿವಾಹಿತ ಮಹಿಳೆಯರು ಮಾಂಗಲ್ಯ ಸರ, ಕಾಲುಂಗುರ ಕಳಚಿಡಬೇಕು ಇಲ್ಲವಾದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಹೇಳಿ ತಾಳಿ, ಕಾಲುಂಗುರ ತೆಗೆಸಿದ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.
ರಾಷ್ಟ್ರೀಯ ಅರ್ಹತಾ ಪರೀಕ್ಷೆ - ನೆಟ್  ಬರೆಯಲಿಕ್ಕಾಗಿ ಜೆಪಿನಗರದ ಬ್ರಿಗೇಡ್‌ ಸ್ಕೂಲ್‌ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಮಹಿಳೆಯರ ತಾಳಿ, ಕಾಲುಂಗುರ, ಬುರ್ಖಾಗಳನ್ನು ಅವರ ಪತಿಯ ಎದುರಿಗೇ ತೆಗೆಸಿದ್ದಾರೆ.  ಪರೀಕ್ಷಾ ಪರಿವೀಕ್ಷಕರು ವಿಧಿಸಿದ ಈ ಕಠಿಣ ನಿಬಂಧನೆಯಿಂದ ಮಹಿಳೆಯರು  ತೀವ್ರ ನೊಂದುಕೊಂಡಿದ್ದಾರೆ.
ಈ ವಿಚಿತ್ರ ನಿಬಂಧನೆ ಕಾರಣ ಕೆಲ ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಬರೆಯದೆ ಹಿಂತಿರುಗಿದ್ದರೆ ಇನ್ನು ಕೆಲವರು ಶಾಲಾ ಆಡಳಿತ ಮಂಡಳಿಯಲ್ಲಿ  ಈ ಕುರಿತು ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಕಡೆಗೆ ತಾಳಿ, ಕಾಲುಂಗುರವನ್ನು ಕಳಚಿ ಪತಿಯ ಕೈಲಿಟ್ಟು ತಾವು ಪರೀಕ್ಷೆಗೆ ಕುಳಿತಿದ್ದಾರೆ.
ನಮ್ಮ ನಂಬಿಕೆ ಮತ್ತು ಧರ್ಮಕ್ಕೆ ವಿರುದ್ಧವಾದುದ್ದನ್ನು ಮಾಡಿಸಿ ನಮಗೆ ನೋವು ಕೊತ್ಟಿದ್ದಾರೆ. ಹಿಂದೂ ಮಹಿಳೆಯರ ಕಾಲುಂಗುರ, ತಾಳಿ, ಮುಸ್ಲಿಮ್ ಮಹಿಳೆಯರ ಬುರ್ಖಾ ತೆಗೆಸಿ ಪರೀಕ್ಷೆಗೆ ಕೂರಿಸಿದ್ದು ಸರಿಯಲ್ಲ. ಮೊಬೈಲ್, ಪರ್ಸ್ ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ ಎನ್ನುವ ನಿಯಮವಿದೆ. ಆದರೆ ತಾಳಿ ಮತ್ತು ಕಾಲುಂಗುರ ತೆಗೆಯುವಂತೆ ಪರೀಕ್ಷಾ ನಿಯಮ ಎಲ್ಲಿಯೂ ಇಲ್ಲ ಎಂದು ಅಭ್ಯರ್ಥಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT