ಸಾಂದರ್ಭಿಕ ಚಿತ್ರ 
ರಾಜ್ಯ

ಷರತ್ತು ಇಲ್ಲದೆ ಎಲ್ಲಾ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಸಾಲಮನ್ನಾ ಘೋಷಣೆಯಿಂದ ತೃಪ್ತಿಗೊಳ್ಳದ ರೈತರು ಇಂದು ರಾಜಧಾನಿಗೆ ಲಗ್ಗೆ ಇಟ್ಟು, ಯಾವುದೇ ಷರತ್ತು ಇಲ್ಲದೆ ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕೆಂದು ಪ್ರತಿಭಟನೆ ನಡೆಸಿದರು.

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಸಾಲಮನ್ನಾ ಘೋಷಣೆಯಿಂದ ತೃಪ್ತಿಗೊಳ್ಳದ ರೈತರು ಇಂದು ರಾಜಧಾನಿಗೆ ಲಗ್ಗೆ ಇಟ್ಟು, ಯಾವುದೇ ಷರತ್ತು ಇಲ್ಲದೆ ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕೆಂದು  ಪ್ರತಿಭಟನೆ ನಡೆಸಿದರು.

 ರಾಜ್ಯ ರೈತ ಸಂಘದ ನೇತೃತ್ವದಲ್ಲಿ  ಆನಂದ್ ರಾವ್ ವೃತ್ತದಿಂದ  ಸ್ವಾತಂತ್ರ್ಯ ಉದ್ಯಾನದವರೆಗೂ  ಪ್ರತಿಭಟನಾ ಮೆರೆವಣಿಗೆ ನಡೆಸಿ, ಯಾವುದೇ ಷರತ್ತು ಇಲ್ಲದೆ ರೈತರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

34 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾದೊಂದಿಗೆ ಕೆಲ ಷರತ್ತುಗಳನ್ನು ವಿಧಿಸಿರುವುದರಿಂದ ಕೆಲ ರೈತರಿಗಷ್ಟೇ ಪ್ರಯೋಜನವಾಗಲಿದ್ದು, ಅನೇಕ ಜನರಿಗೆ ಈ ಸೌಲಭ್ಯ ದೊರಕದಂತಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

 ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ 54 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ. ಅಧಿಕಾರಕ್ಕೆ ಬಂದ ನಂತರ  ಷರತ್ತಿನೊಂದಿಗೆ ಕೇವಲ 34 ಸಾವಿರ ಕೋಟಿ ರೂಪಾಯಿ ಸಾಲ ಮನ್ನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕೆಂಬುದು ತಮ್ಮ ಬೇಡಿಕೆಯಾಗಿದೆ ಎಂದರು.

 ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕದ ಹಾವೇರಿಯಲ್ಲಿ  ಜುಲೈ 21 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕೋಡಿಹಳ್ಳಿ  ಚಂದ್ರಶೇಖರ್ ಹೇಳಿದರು.  ನಂತರ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?