ಸಾಂದರ್ಭಿಕ ಚಿತ್ರ 
ರಾಜ್ಯ

ಷರತ್ತು ಇಲ್ಲದೆ ಎಲ್ಲಾ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಸಾಲಮನ್ನಾ ಘೋಷಣೆಯಿಂದ ತೃಪ್ತಿಗೊಳ್ಳದ ರೈತರು ಇಂದು ರಾಜಧಾನಿಗೆ ಲಗ್ಗೆ ಇಟ್ಟು, ಯಾವುದೇ ಷರತ್ತು ಇಲ್ಲದೆ ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕೆಂದು ಪ್ರತಿಭಟನೆ ನಡೆಸಿದರು.

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಸಾಲಮನ್ನಾ ಘೋಷಣೆಯಿಂದ ತೃಪ್ತಿಗೊಳ್ಳದ ರೈತರು ಇಂದು ರಾಜಧಾನಿಗೆ ಲಗ್ಗೆ ಇಟ್ಟು, ಯಾವುದೇ ಷರತ್ತು ಇಲ್ಲದೆ ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕೆಂದು  ಪ್ರತಿಭಟನೆ ನಡೆಸಿದರು.

 ರಾಜ್ಯ ರೈತ ಸಂಘದ ನೇತೃತ್ವದಲ್ಲಿ  ಆನಂದ್ ರಾವ್ ವೃತ್ತದಿಂದ  ಸ್ವಾತಂತ್ರ್ಯ ಉದ್ಯಾನದವರೆಗೂ  ಪ್ರತಿಭಟನಾ ಮೆರೆವಣಿಗೆ ನಡೆಸಿ, ಯಾವುದೇ ಷರತ್ತು ಇಲ್ಲದೆ ರೈತರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

34 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾದೊಂದಿಗೆ ಕೆಲ ಷರತ್ತುಗಳನ್ನು ವಿಧಿಸಿರುವುದರಿಂದ ಕೆಲ ರೈತರಿಗಷ್ಟೇ ಪ್ರಯೋಜನವಾಗಲಿದ್ದು, ಅನೇಕ ಜನರಿಗೆ ಈ ಸೌಲಭ್ಯ ದೊರಕದಂತಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

 ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ 54 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ. ಅಧಿಕಾರಕ್ಕೆ ಬಂದ ನಂತರ  ಷರತ್ತಿನೊಂದಿಗೆ ಕೇವಲ 34 ಸಾವಿರ ಕೋಟಿ ರೂಪಾಯಿ ಸಾಲ ಮನ್ನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕೆಂಬುದು ತಮ್ಮ ಬೇಡಿಕೆಯಾಗಿದೆ ಎಂದರು.

 ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕದ ಹಾವೇರಿಯಲ್ಲಿ  ಜುಲೈ 21 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕೋಡಿಹಳ್ಳಿ  ಚಂದ್ರಶೇಖರ್ ಹೇಳಿದರು.  ನಂತರ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!