ಸಂಗ್ರಹ ಚಿತ್ರ 
ರಾಜ್ಯ

ವೇತನ ಹೆಚ್ಚಳಕ್ಕೆ ಆಗ್ರಹ: ಪ್ರತಿಭಟನೆ ನಡೆಸಲು ಚಾಮುಂಡಿ ಬೆಟ್ಟದ ಪುರೋಹಿತರ ನಿರ್ಧಾರ

ವೇತನ ಹೆಚ್ಚಳ ಆಗ್ರಹಿಸಿ ಪ್ರತಿಭಟನೆ ನಡೆಸಲು ಚಾಮುಂಡಿ ಬೆಟ್ಟದ ಪುರೋಹಿತರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ...

ಮೈಸೂರು; ವೇತನ ಹೆಚ್ಚಳ ಆಗ್ರಹಿಸಿ ಪ್ರತಿಭಟನೆ ನಡೆಸಲು ಚಾಮುಂಡಿ ಬೆಟ್ಟದ ಪುರೋಹಿತರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. 
ಕಳೆದ ಹತ್ತು ವರ್ಷಗಳಿಂದ ವೇತನ ಹೆಚ್ಚಳ ಮಾಡದಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಪುರೋಹಿತರು ಆಷಾಡ ತಿಂಗಳು ಮತ್ತು ಚಾಮುಂಡೇಶ್ವರಿ ಜಯಂತಿಯ ದಿನದಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. 
ವೇತನ ಹೆಚ್ಚಳ ಮಾಡುವಂತೆ ಹಲವು ವರ್ಷಗಳಿಂದರೂ ಜಿಲ್ಲಾ ಉಪ ಆಯುಕ್ತರು ಹಾಗೂ ಮುಜರಾಯಿ ಇಲಾಖೆ ಬಳಿ ಮನವಿ ಮಾಡಿಕೊಳ್ಳುತ್ತಲೇ ಇದ್ದೇವೆ. ಆದರೆ, ನಮ್ಮ ಮನವಿಗಳನ್ನು ಅಧಿಕಾರಿಗಳು ತಿರಸ್ಕರಿಸುತ್ತಲೇ ಬಂದಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆಂದು ಶ್ರೀ ಚಾಮುಂಡೇಶ್ವರಿ ದೇಗುಲ ನೌಕರರ ಸಂಘಟನೆ ಸದಸ್ಯರು ತಿಳಿಸಿದ್ದಾರೆ. 
ಶ್ರೀ ಚಾಮುಂಡೇಶ್ವರಿ ದೇಗುಲ ನೌಕರರ ಸಂಘಟನೆ ಅಧ್ಯಕ್ಷ ಕೆ. ಶ್ರೀನಿವಾಸ್ ಅವರು ಮಾತನಾಡಿ, 5ನೇ ವೇತನ ಆಯೋಗದ ಅಡಿಯಲ್ಲಿ 160 ನೌಕರರ ಪೈಕಿ ಕೇವಲ 80 ಮಂದಿಗೆ ಮಾತ್ರ ವೇತನವನ್ನು ನೀಡಲಾಗುತ್ತಿದೆ. ಹಬ್ಬಗಳ ದಿನದಂದು, ಸಾರ್ವತ್ರಿಕ ರಜೆ ದಿನದಂದೂ ಕೂಡ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 8 ಗಂಟೆಗಳಿಗೂ ಅಧಿಕ ಕಾಲ ಕಾರ್ಯನಿರ್ವಹಿಸುತ್ತಾರೆ. 2017-18 ಸಾಲಿನಲ್ಲಿ ದೇಗುಲದ ವಾರ್ಷಿಕವಾಗಿ ರೂ.29.87 ಕೋಟಿ ಬಂದಿದೆ. 160 ನೌಕರರಿಗೂ ಆಯೋಗದ ಅನ್ವಯ ವೇತನವನ್ನು ನೀಡಿದರು, ದೇಗುಲದ ಆದಾಯದ ಮೇಲೆ ಶೇ.35 ರಷ್ಟೂ ಕೂಡ ಪರಿಣಾಮ ಬೀರುವುದಿಲ್ಲ. ವೇತನ ನೀಡುವುದರಲ್ಲಿಯೂ ವಿಳಂಬ ನೀತಿ ಅನುಸರಿಸಲಾಗುತ್ತಿದ್ದು, ಇದು ಸಂಕಷ್ಟದಲ್ಲಿ ಜೀವನ ನಡೆಸುವಂತ ಪರಿಸ್ಥಿತಿಗಳನ್ನು ಎದುರಾಗಿಸಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT