ಸಂಗ್ರಹ ಚಿತ್ರ 
ರಾಜ್ಯ

ವೇತನ ಹೆಚ್ಚಳಕ್ಕೆ ಆಗ್ರಹ: ಪ್ರತಿಭಟನೆ ನಡೆಸಲು ಚಾಮುಂಡಿ ಬೆಟ್ಟದ ಪುರೋಹಿತರ ನಿರ್ಧಾರ

ವೇತನ ಹೆಚ್ಚಳ ಆಗ್ರಹಿಸಿ ಪ್ರತಿಭಟನೆ ನಡೆಸಲು ಚಾಮುಂಡಿ ಬೆಟ್ಟದ ಪುರೋಹಿತರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ...

ಮೈಸೂರು; ವೇತನ ಹೆಚ್ಚಳ ಆಗ್ರಹಿಸಿ ಪ್ರತಿಭಟನೆ ನಡೆಸಲು ಚಾಮುಂಡಿ ಬೆಟ್ಟದ ಪುರೋಹಿತರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. 
ಕಳೆದ ಹತ್ತು ವರ್ಷಗಳಿಂದ ವೇತನ ಹೆಚ್ಚಳ ಮಾಡದಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಪುರೋಹಿತರು ಆಷಾಡ ತಿಂಗಳು ಮತ್ತು ಚಾಮುಂಡೇಶ್ವರಿ ಜಯಂತಿಯ ದಿನದಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. 
ವೇತನ ಹೆಚ್ಚಳ ಮಾಡುವಂತೆ ಹಲವು ವರ್ಷಗಳಿಂದರೂ ಜಿಲ್ಲಾ ಉಪ ಆಯುಕ್ತರು ಹಾಗೂ ಮುಜರಾಯಿ ಇಲಾಖೆ ಬಳಿ ಮನವಿ ಮಾಡಿಕೊಳ್ಳುತ್ತಲೇ ಇದ್ದೇವೆ. ಆದರೆ, ನಮ್ಮ ಮನವಿಗಳನ್ನು ಅಧಿಕಾರಿಗಳು ತಿರಸ್ಕರಿಸುತ್ತಲೇ ಬಂದಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆಂದು ಶ್ರೀ ಚಾಮುಂಡೇಶ್ವರಿ ದೇಗುಲ ನೌಕರರ ಸಂಘಟನೆ ಸದಸ್ಯರು ತಿಳಿಸಿದ್ದಾರೆ. 
ಶ್ರೀ ಚಾಮುಂಡೇಶ್ವರಿ ದೇಗುಲ ನೌಕರರ ಸಂಘಟನೆ ಅಧ್ಯಕ್ಷ ಕೆ. ಶ್ರೀನಿವಾಸ್ ಅವರು ಮಾತನಾಡಿ, 5ನೇ ವೇತನ ಆಯೋಗದ ಅಡಿಯಲ್ಲಿ 160 ನೌಕರರ ಪೈಕಿ ಕೇವಲ 80 ಮಂದಿಗೆ ಮಾತ್ರ ವೇತನವನ್ನು ನೀಡಲಾಗುತ್ತಿದೆ. ಹಬ್ಬಗಳ ದಿನದಂದು, ಸಾರ್ವತ್ರಿಕ ರಜೆ ದಿನದಂದೂ ಕೂಡ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 8 ಗಂಟೆಗಳಿಗೂ ಅಧಿಕ ಕಾಲ ಕಾರ್ಯನಿರ್ವಹಿಸುತ್ತಾರೆ. 2017-18 ಸಾಲಿನಲ್ಲಿ ದೇಗುಲದ ವಾರ್ಷಿಕವಾಗಿ ರೂ.29.87 ಕೋಟಿ ಬಂದಿದೆ. 160 ನೌಕರರಿಗೂ ಆಯೋಗದ ಅನ್ವಯ ವೇತನವನ್ನು ನೀಡಿದರು, ದೇಗುಲದ ಆದಾಯದ ಮೇಲೆ ಶೇ.35 ರಷ್ಟೂ ಕೂಡ ಪರಿಣಾಮ ಬೀರುವುದಿಲ್ಲ. ವೇತನ ನೀಡುವುದರಲ್ಲಿಯೂ ವಿಳಂಬ ನೀತಿ ಅನುಸರಿಸಲಾಗುತ್ತಿದ್ದು, ಇದು ಸಂಕಷ್ಟದಲ್ಲಿ ಜೀವನ ನಡೆಸುವಂತ ಪರಿಸ್ಥಿತಿಗಳನ್ನು ಎದುರಾಗಿಸಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT