ರಾಜ್ಯ

ಹಿರಿಯ ರಾಜಕಾರಣಿ ಬಿಎ ಮೊಹಿದ್ದೀನ್ ನಿಧನ: ಸಿಎಂ ಸೇರಿದಂತೆ ಗಣ್ಯರ ಸಂತಾಪ

Shilpa D
ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ.ಎ ಮೊಹಿದ್ದೀನ್ (81) ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರಿನ ಬಜ್ಪೆಯವರಾದ ಬಿ.ಎ. ಮೊಹಿದ್ದೀನ್, ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಂತರ ಜನತಾ ಪರಿವಾರದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು.
1978ರಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಜನತಾಪರಿವಾರ ಸೇರಿ ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು.
ಅವರ ಮೃತದೇಹ ಮಂಗಳವಾರ ಮಧ್ಯಾಹ್ನ ಮಂಗಳೂರಿಗೆ ಬರಲಿದ್ದು, ಅವರ ಹುಟ್ಟೂರು ಬಜ್ಪೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ  ಬಿ.ಎ. ಮೊಹಿದೀನ್ ಅವರ ನಿಧನ ಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
SCROLL FOR NEXT