ಬೆಂಗಳೂರು: ಸ್ನಾನದ ಮನೆಯಲ್ಲಿ ಟೆಕ್ಕಿ ದಂಪತಿ ಶವ ಪತ್ತೆ 
ರಾಜ್ಯ

ಬೆಂಗಳೂರು: ಸ್ನಾನದ ಮನೆಯಲ್ಲಿ ಟೆಕ್ಕಿ ದಂಪತಿ ಶವ ಪತ್ತೆ

ಸಾಫ್ಟ್ ವೇರ್ ಇಂಜಿನಿಯರ್ ಹಾಗೂ ಆತನ ಪತ್ನಿ ಫ್ಲ್ಯಾಟ್ ಒಂದರ ಬಾತ್ ರೂಂ ನಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

ಬೆಂಗಳೂರು: ಸಾಫ್ಟ್ ವೇರ್ ಇಂಜಿನಿಯರ್ ಹಾಗೂ ಆತನ ಪತ್ನಿ ಫ್ಲ್ಯಾಟ್ ಒಂದರ ಬಾತ್ ರೂಂ ನಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ಮಹೇಶ್(35) ಮತ್ತು ಶೀಲಾ (30)  ಮೃತ ದಂಪತಿಯಾಗಿದ್ದು ಸ್ನಾನ ಮಾಡುತಿದ್ದಾಗ ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿದೆ. ಆದರೆ ಮರಣೋತ್ತರ ಪರೀಕ್ಷೆ ಬಳಿಕವೇ ಸತ್ಯ ಹೊರಬೀಳಲಿದೆ ಎಂದು ಪೋಲೀಸರು ಹೇಳಿದ್ದಾರೆ.
ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶಿವಗಂಗಾ ಅಪಾರ್ಟ್​ಮೆಂಟ್​ನಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ.ಮಧ್ಯಾಹ್ನ ಸುಮಾರು 2.30ಕ್ಕೆ ದಂಪತಿಯ ಪುತ್ರಿ ಶಾಲೆಯಿಂದ ಮನೆಗೆ ಹಿಂತಿರುಗಿದಾಗ ಘಟನೆ ಬೆಳಕಿಗೆ ಬಂದಿದೆ.
ಮೃತ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು ಕಿರಿಯ ಮಗು ನೆಲಮಹಡಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಇದ್ದರೆ ಹಿರಿಯ ಮಗು ಶಾಲೆಗೆ ಹೋಗಿದ್ದದ್ದು ಮನೆಗೆ ಮರಳಿದೆ. ಆಗ ಸಂಬಂಧಿಕರು ಮಹೇಶ್ ಹಾಗು ಆತನ ಪತ್ನಿಯನ್ನು ಕರೆದಿದ್ದಾರೆ.ಆದರೆ ದಂಪತಿಗಳಿಂದ ಯಾವ ಪ್ರತಿಕ್ರಿಯೆ ಬರದ ಕಾರಣ ಮೆಟ್ಟಿಲೇರಿ ಬಂದ ಅವರು ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ಕಂಡಿದ್ದು ಕಾಲಿಂಗ್ ಬೆಲ್ ಒತ್ತಿದ್ದಾರೆ. ಆದರೂ ಸಹ ಯಾರೂ ಬಾಗಿಲು ತೆರೆಯದೆ ಹೋದ ಹಿನ್ನೆಲೆಯಲ್ಲಿ ಪೋಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಪೋಲೀಸರು ಬಾಗಿಲನ್ನು ಒಡೆದು ಒಳ ಪ್ರವೇಶಿಸಿದಾಗ ದಂಪತಿಗಳು ಸ್ನಾನದ ಕೋಣೆಯಲ್ಲಿ ಶವವಾಗಿರುವುದು ಪತ್ತೆಯಾಗಿದೆ.
ಮೂಲತಃ ಬೆಳಗಾವಿಯ ಅಥಣಿ ತಾಲೂಕಿನ ನಿವಾಸಿಯಾದ ಮಹೇಶ್ ಏಳು ವರ್ಷಗಳ ಹಿಂದೆ ಶೀಲಾಳನ್ನು ವಿವಾಹವಾಗಿದ್ದ.ಮಹೇಶ್​ ವೈಟ್​​ಫೀಲ್ಟ್​ ಹತ್ತಿರ ಸಾಫ್ಟ್​ವೇರ್​  ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರೆಂದು ಹೇಳಲಾಗಿದೆ. 
ಇದೀಗ ದಂಪತಿಗಳಿಬ್ಬರೂ ಮೃತಪಟ್ಟ ಕಾರಣ  6 ಮತ್ತು 4 ವರ್ಷದ ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT