ಸಂಗ್ರಹ ಚಿತ್ರ 
ರಾಜ್ಯ

ಜಲಾಶಯಗಳ ಸಲಹಾ ಸಮಿತಿಗೆ ಸಚಿವರೇ ಮುಖ್ಯಸ್ಥರು: ಸರ್ಕಾರ

ರಾಜ್ಯದಲ್ಲಿರುವ ಪ್ರತೀ ಅಣೆಕಟ್ಟು ಮತ್ತು ಜಲಾಶಯಗಳ ನಿರ್ವಹಣೆಗೆ ಸಲಹಾ ಸಮಿತಿಗಳನ್ನು ನೇಮಿಸಿ, ಸಮಿತಿಗೆ ಸಚಿವರನ್ನೇ ಮುಖ್ಯಸ್ಥರನ್ನಾಗಿ ಮಾಡಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನಿರ್ಧರಿಸಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿರುವ ಪ್ರತೀ ಅಣೆಕಟ್ಟು ಮತ್ತು ಜಲಾಶಯಗಳ ನಿರ್ವಹಣೆಗೆ ಸಲಹಾ ಸಮಿತಿಗಳನ್ನು ನೇಮಿಸಿ, ಸಮಿತಿಗೆ ಸಚಿವರನ್ನೇ ಮುಖ್ಯಸ್ಥರನ್ನಾಗಿ ಮಾಡಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನಿರ್ಧರಿಸಿದ್ದಾರೆ. 
ಈ ಕುರಿತಂತೆ ಮಂಗಳವಾರ ಮಾತನಾಡಿದ ಅವರು, ಜಲಾಶಯಗಳ ನೀರಿನ ಮಟ್ಟ ನೋಡಿಕೊಳ್ಳಲು ಹಾಗೂ ರೈತರು ಮತ್ತು ಜಲ ಸಂಪನ್ಮೂಲಕ ಸಚಿವಾಲಯದ ನಡುವಿನ ಸಂಪರ್ಕಕಾರರಾಗಿ ಸಲಹಾ ಸಮಿತಿಯನ್ನು ರಚಿಸಲಾಗುತ್ತಿದ್ದು, ಪ್ರತೀ ಸಮಿತಿಗು ಸಚಿವರನ್ನೇ ಮುಖ್ಯಸ್ಥರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. 
ಪ್ರತೀಯೊಂದು ಜಲಾಶಯಕ್ಕೂ ಸಚಿವರೊಬ್ಬ ಮುಖ್ಯಸ್ಥಿಕೆಯಲ್ಲಿ ಸಲಹಾ ಸಮಿತಿಯನ್ನು ರಚನೆ ಮಾಡಲಾಗುತ್ತದೆ. ಈ ಸಚಿವರ ಅಧಿಕಾರಿಗಳು, ಸ್ಥಳೀಯ ಸಚಿವರು ಹಾಗೂ ರೈತರೊಂದಿಗೆ ಸಭೆ ನಡೆಸಲಿದ್ದು, ಆ ಭಾಗದಲ್ಲಿ ಮುಂದೆ ಏನು ಮಾಡಬಹುದು, ಕೃಷಿಗೆ ನೀರಿನ ಬಳಕೆ ಕುರಿತಂತೆ ಸಭೆ ನಡೆಸಿ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 
ಸಚಿವ ಸಿಎಸ್ ಪುಟ್ಟರಾಜು ಅವರನ್ನು ಮೈಸೂರಿನ ಕೆಆರ್'ಎಸ್ ಅಣೆಕಟ್ಟು ಸಮಿತಿ ಮುಖ್ಯಸ್ಥರನ್ನಾಗಿ ಮಾಡಲಾಗಿದ್ದು, ಸ.ರಾ. ಮಹೇಳ್ ಅವರನ್ನು ಹಾರಂಗಿ, ರೇವಣ್ಣ ಅವರನ್ನು ಹೇಮಾವತಿ, ಕಬಿನಿಗೆ ಪುಟ್ಟರಂಗಶೆಟ್ಟಿ, ಮಲಪ್ರಭಾ ಮತ್ತು ಘಟಪ್ರಭಾಗೆ ರಮೇಶ್ ಜಾರಕಿಹೊಳಿ, ತುಂಗಭದ್ರಾ ಅಣೆಕಟ್ಟು ಸಲಹಾ ಸಮಿತಿಗೆ ವೆಂಕಟರಾವ್ ನಾಡಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT