ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ 
ರಾಜ್ಯ

ಅನಧಿಕೃತ ಕಟ್ಟಡ ನಿರ್ಮಾಣ ತಡೆಗೆ ಹೊಸ ಕಾನೂನು: ಜಿ. ಪರಮೇಶ್ವರ್

ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ಕಟ್ಟಡಗಳ ನಿರ್ಮಾಣ ತಡೆಯಲು ಅಗತ್ಯವಾದ ಹೊಸ ಕಾನೂನು ರೂಪಿಸುವುದಾಗಿ ಸರ್ಕಾರ ಮಂಗಳವಾರ ತಿಳಿಸಿದೆ...

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ಕಟ್ಟಡಗಳ ನಿರ್ಮಾಣ ತಡೆಯಲು ಅಗತ್ಯವಾದ ಹೊಸ ಕಾನೂನು ರೂಪಿಸುವುದಾಗಿ ಸರ್ಕಾರ ಮಂಗಳವಾರ ತಿಳಿಸಿದೆ. 
ಜೆಡಿಎಸ್ ಸದಸ್ಯ. ಅ.ದೇವೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಗೆ ಅಗತ್ಯ ಹೊಸ ಕಾನೂನು ರಚನೆಗೆ ಚಿಂತನೆಗಳು ನಡೆಯುತ್ತಿವೆ. ಈ ಸಂಬಂಧ ಅನುಭವಿ ಶಾಸಕರು, ಕಾನೂನು ಪಂಡಿತರು ಹಾಗೂ ನಗರಾಭಿವೃದ್ಧಿ ತಜ್ಞರ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. 
ನಗರದಲ್ಲಿ ಮುಂದೆ ನಿರ್ಮಾಣವಾಗುವ ಕಟ್ಟಡಗಳಲ್ಲಿ ಕಾನೂನು ಉಲ್ಲಂಘನೆ ತಡೆಯಲು ಅಗತ್ಯ ಕಾನೂನು ರೂಪಿಸಬೇಕಾದ ಅಗತ್ಯವಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಕಾನೂನು ಪಂಡಿತರು, ಅನುಭವಿ ಶಾಸಕರು ಮತ್ತು ನಗರಾಭಿವೃದ್ಧಿ ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು. 
ಮಹದೇವಪುರದಲ್ಲಿ ಬಿಬಿಎಂಪಿ ಪ್ರಾಯೋಗಿಕವಾಗಿ ಖಾಸಗಿ ಸಂಸ್ಥೆಯೊಂದರಿಂದ ನಡೆಸಿದ ಸಮೀಕ್ಷೆಯಲ್ಲಿ 77 ಕಟ್ಟಡಗಳನ್ನು ಅನಧಿಕೃತವಾಗಿ ನಿರ್ಮಿಸಿರುವುದು ಕಂಡು ಬಂದಿದೆ. ಇದರಿಂದ ರೂ.450 ಕೋಟಿ ದಂಡ ಸಹಿತ ತೆರಿಗೆ ಸಂಗ್ರಹಿಸಲಾಗಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT