ಆಸ್ಪತ್ರೆ ಹೊರಗೆ ಕಾಯುತ್ತಿರುವ ಮೃತ ಶರವಣ ಸ್ನೇಹಿತರು 
ರಾಜ್ಯ

ಬೆಂಗಳೂರು: ಸ್ವಚ್ಛತೆಗಾಗಿ ಬಾಯ್ಲರ್ ಒಳಗೆ ಇಳಿದಿದ್ದ ಮೂವರ ದುರ್ಮರಣ

ಸ್ವಚ್ಛತಾ ಕಾರ್ಯಕ್ಕಾಗಿ ಬಾಯ್ಲರ್​ ಒಳಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ....

ಬೆಂಗಳೂರು: ಸ್ವಚ್ಛತಾ ಕಾರ್ಯಕ್ಕಾಗಿ ಬಾಯ್ಲರ್​ ಒಳಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿಯ ಕೈಗಾರಿಕೆ ಪ್ರದೇಶದಲ್ಲಿರುವ ಆಂಥ್ಯಾಮ್ಬಯೋಸೈನ್​ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಬಾಯ್ಲರ್​ ಒಳಗೆ ಇಳಿದಿದ್ದ ಕಾರ್ಮಿಕರು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ ಲೋಕೇಶ್, ಕನಕಪುರ ತಾಲೂಕಿನ ಗೊಟ್ಟಿಗೆಹಳ್ಳಿ ನಿವಾಸಿ ಮಹೇಶ್, ತಮಿಳುನಾಡು ಮೂಲದ ಶರವಣ ಮೃತಪಟ್ಟಿದ್ದಾರೆ. ಹರಿ ವಿಲಿಘನ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ರಕ್ಷಿಸಲು ತೆರಳಿದ ಮಹೇಶ್ ಮತ್ತು ಶರವಣ ಕೂಡ ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ್ದಾರೆ. ಘಟನೆ ನಂತರ ಫ್ಯಾಕ್ಟರಿಯಲ್ಲಿ ಯಾವೊಬ್ಬ ಕಾರ್ಮಿಕರು ಹಾಗೂ ಆಡಳಿತ ಮಂಡಳಿಯ ಒಬ್ಬ ಸದಸ್ಯರು ಇಲ್ಲದಂತೆ ನಾಪತ್ತೆಯಾಗಿದ್ದಾರೆ. ಹಾರೋಹಳ್ಳಿ ಪೊಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!