ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ : ಕಲಬುರಗಿಯಲ್ಲಿ ರೈಲ್ವೆ ಯೋಜನೆಗಳನ್ನು ವಿಳಂಬಗೊಳಿಸದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಅಭಿವೃದ್ದಿ ಹಾಗೂ ಸಹಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ಒದಗಿಸುತ್ತಿದ್ದರು ಯೋಜನೆ ಪೂರ್ಣಗೊಳಿಸುವಲ್ಲಿ ಏಕೆ ವಿಳಂಬ ಮಾಡಲಾಗುತ್ತಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಕಲಬುರಗಿ ವಲಯದಲ್ಲಿ ಅನೇಕ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, 11 ತಿಂಗಳೊಳಗೆ ಪೂರ್ಣಗೊಳ್ಳಲಿವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಮದರ್ ತೆರೇಸಾ ಶಾಲೆ ಮತ್ತು ಅಪ್ಜಲಪುರ ರಸ್ತೆಯಲ್ಲಿನ ರೈಲ್ವೆ ಮೇಲ್ಸುತುವೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಬೇಕು , ವಾರಕ್ಕೊಮ್ಮೆ ರೈಲ್ವೆ ಮೇಲ್ಸುತುವೆ, ವಿದ್ಯುದೀಕರಣಕ್ಕೆ ಸಂಬಂಧಿಸಿದ ಕೆಲಸಗಳ ಬಗ್ಗೆ ಜಿಲ್ಲಾಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಬೇಕು ಎಂದು ಖರ್ಗೆ ನಿರ್ದೇಶನ ನೀಡಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos