ಕುಮಾರಸ್ವಾಮಿ-ಕೃಷಿ ತಜ್ಞ ಸ್ವಾಮಿನಾಥನ್ ಸಭೆ, ರೈತರ ಸಮಸ್ಯೆ ಕುರಿತು ಚರ್ಚೆ 
ರಾಜ್ಯ

ಕೃಷಿ ತಜ್ಞ ಸ್ವಾಮಿನಾಥನ್ ಜೊತೆ ಹೆಚ್ ಡಿ ಕುಮಾರಸ್ವಾಮಿ ಸಭೆ, ರೈತರ ಸಮಸ್ಯೆ ಕುರಿತು ಚರ್ಚೆ

ರಾಜ್ಯದ ರೈತರ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ವಿಶ್ವದ ವಿವಿಧೆಡೆಗಳಲ್ಲಿ ಅಳವಡಿಸಿಕೊಳ್ಳಲಾದ ಉತ್ತಮ ಕೃಷಿ ಪದ್ದತಿಯ ಜಾರಿಗೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು.....

ಬೆಂಗಳೂರು: ರಾಜ್ಯದ ರೈತರ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ವಿಶ್ವದ ವಿವಿಧೆಡೆಗಳಲ್ಲಿ ಅಳವಡಿಸಿಕೊಳ್ಳಲಾದ ಉತ್ತಮ ಕೃಷಿ ಪದ್ದತಿಯ ಜಾರಿಗೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ತಿಳಿಸಿದ್ದಾರೆ.
ರಾಜ್ಯದಲ್ಲಿ ರೈತರ ಸುಧಾರಣೆ, ಕೃಷಿ ಅಭಿವೃದ್ದಿಗೆ ಕಾರಣವಾಗಿದ್ದ ಕೃಷಿ ತಜ್ಞ ಡಾ.ಎಸ್.ಎಸ್. ಸ್ವಾಮಿನಾಥನ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಕುಮಾರಸ್ವಾಮಿ ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿ ಅಳವಡಿಕೆ ಕುರಿತಂತೆ ಬಜೆಟ್ ಪ್ರಸ್ತಾವನೆಯನ್ನು ಸ್ವಾಮಿನಾಥನ್ ಸ್ವಾಗತಿಸಿದ್ದಾರೆ ಎಂದು ತಿಳಿಸಿದರು.
ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಲುವಾಗಿ ಸ್ವಾಮಿನಾಥನ್ ಅವರಿಂದ ಸಲಹೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. 
ಶೀಘ್ರವೇ ಕೃಷಿ ಸಚಿವ ಶಿವಶಂಕರ ರೆಡ್ಡಿ 30 ಜಿಲ್ಲೆಗಳ ಕೃಷಿ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ ಮತ್ತು ಪ್ರತಿ ಜಿಲ್ಲೆಯಲ್ಲಿ ಕಂಡುಬರುವ ಸಮಸ್ಯೆಯನ್ನು ಅಧಿಕಾರಿಗಳ ಜತೆ ಚರ್ಚಿಸಲಾಗುತ್ತದೆ.ಹಾಗೆಯೇ ಆಯಾ ಜಿಲ್ಲೆಗೆ ನಿರ್ದಿಷ್ಟ ಪರಿಹಾರಗಳನ್ನು ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಕೃಷಿ ಅಧಿಕಾರಿಗಳ ಸಭೆಯಲ್ಲಿ ತಾವೂ ಭಾಗವಹಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಬೆನ್ನೆಲುಬು ಮುರಿಯಲು ಅಮೆರಿಕಾ ಪ್ಲ್ಯಾನ್: 'Economic D-Day' ಘೋಷಣೆ; ನೆರವು ನೀಡುವ ರಾಷ್ಟ್ರಗಳಿಗೂ ಕಾದಿದೆ ಗಂಡಾಂತರ..!

ಭಯೋತ್ಪಾದಕರ ರಕ್ಷಣೆಗೆ ವಿಶ್ವಸಂಸ್ಥೆ ವೇದಿಕೆ ಬಳಸದಿರಿ: ಪಾಕ್-ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ

‘ಯಾವುದೇ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿಲ್ಲ’: ಸಚಿವ ನಾಗೇಂದ್ರ ಕುರಿತು DCM ಡಾ.ಜಿ.ಪರಮೇಶ್ವರ್ ಸಮರ್ಥನೆ

ಲೋಕಸಭೆ ಸದಸ್ಯ ಬಲ 25 ವರ್ಷ ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳಲು ಕಾಂಗ್ರೆಸ್ ಒತ್ತಾಯ; 2029ರಿಂದ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ಆಗ್ರಹ

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!