ಸಂಗ್ರಹ ಚಿತ್ರ 
ರಾಜ್ಯ

ಹುಚ್ಚು ಸಾಹಸ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ, ಭೀಕರ ದೃಶ್ಯ!

ಅಪಾಯಕಾರಿ ಅಂತ ತಿಳಿದಿದ್ದರೂ ಇಂದಿನ ಯುವಕರು ವಿಚಿತ್ರ ಸಾಹಸಗಳನ್ನು ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ...

ಬೆಂಗಳೂರು: ಅಪಾಯಕಾರಿ ಅಂತ ತಿಳಿದಿದ್ದರೂ ಇಂದಿನ ಯುವಕರು ವಿಚಿತ್ರ ಸಾಹಸಗಳನ್ನು ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. 
ಚಲಿಸುತ್ತಿದ್ದ ರೈಲಿನ ಕಂಬಿಯನ್ನು ಹಿಡಿದುಕೊಂಡು ನೇತಾಡುತ್ತಿದ್ದ ಯುವಕ ಕೈಬಿಟ್ಟಿದ್ದರಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದ್ದು, ಇದನ್ನು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅರಿಬಿಟ್ಟಿದ್ದು ವಿಡಿಯೋ ಇದೀಗ ವೈರಲ್ ಆಗಿದೆ. ನಾಂದೇಡ್ ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. 
ಯಾವ ಕಾರಣಕ್ಕೆ ಈ ಯುವಕ ಬೋಗಿಯ ಕಂಬಿಯನ್ನು ಹಿಡಿದುಕೊಂಡು ಬರುತ್ತಿದ್ದ ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ ಅಪಾಯ ಸ್ಥಿತಿಯಲ್ಲಿದ್ದ ಯುವಕನನ್ನು ರೈಲಿನ ಚೈನನ್ನು ಎಳೆದು ಒಳಗೆ ಕರೆದುಕೊಳ್ಳಬಹುದಿತ್ತು ಆದರೆ ಇದನ್ನು ಮಾಡದೇ ರೈಲಿನಲ್ಲಿದ್ದ ಕೆಲವರು ವಿಡಿಯೋ ಮಾಡುವುದರಲ್ಲಿ ಮಗ್ನರಾಗಿದ್ದಾರೆ. 
ತುಂಬಾ ಹೊತ್ತಿನ ತನಕ ಆ ಯುವಕ ಬೋಗಿಯ ಕಂಬಿಯನ್ನು ಹಿಡಿದುಕೊಂಡು ನೇತಾಡಿಕೊಂಡು ಬರುತ್ತಿದ್ದ. ಮಧ್ಯದಲ್ಲಿ ಆತನ ಕೈ ಸೋತಿದ್ದರಿಂದ ಹಿಡಿದುಕೊಂಡಿದ್ದನ್ನು ಬಿಟ್ಟಿದ್ದಾನೆ. ಇದರಿಂದ ಕೆಳಗೆ ಬಿದ್ದ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆ ಬಳಿಕ ಆತನಿಗೆ ಏನಾಗಿದೆ ಎಂಬುದು ತಿಳಿದುಬಂದಿಲ್ಲ.  ಸದ್ಯಕ್ಕೆ ನೇಟಿಗರು ಯುವಕನಿಗೆ ಸಹಾಯ ಮಾಡದೇ ವಿಡಿಯೋ ಮಾಡಿದವರ ಕೃತ್ಯವನ್ನು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT