ಬೆಂಗಳೂರು: ಶಾಲಾ ವಾಹನ ಡಿಕ್ಕಿ, ಮಗನ ಎದುರೇ ಮಹಿಳೆಯ ದುರ್ಮರಣ 
ರಾಜ್ಯ

ಬೆಂಗಳೂರು: ಶಾಲಾ ವಾಹನ ಡಿಕ್ಕಿ, ಮಗನ ಎದುರೇ ಮಹಿಳೆಯ ದುರ್ಮರಣ

ಅತಿ ವೇಗವಾಗಿ ಬಂದ ಶಾಲಾ ವಾಹನದಡಿ ಸಿಕ್ಕು 35 ವರ್ಷದ ಮಹಿಳೆಯೊಬ್ಬರು ತನ್ನ ಮಗೆನೆದುರೇ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.

ಬೆಂಗಳೂರು: ಅತಿ ವೇಗವಾಗಿ ಬಂದ ಶಾಲಾ ವಾಹನದಡಿ ಸಿಕ್ಕು 35 ವರ್ಷದ ಮಹಿಳೆಯೊಬ್ಬರು ತನ್ನ ಮಗನೆದುರೇ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಶಾಲಾ ವ್ಯಾನ್ ಮಹಿಳಾ ಚಾಲಕಿಯನ್ನು ಬಂಧಿಸಿದ ಪೋಲೀಸರು ಚಾಲಕಿಯ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆಂದು ಹೇಳಿದ್ದಾರೆ. 
ಸತ್ತ ಮಹಿಳೆಯನ್ನು ಗೋವಿಂದರಾಜು ಅವರ ಪತ್ನಿ ಪೂರ್ಣಿಮಾ ಎಂದು ಗುರುತಿಸಲಾಗಿದ್ದು ಆರೋಪಿ ಚಾಲಕಿ ನೇಪಾಳ ಮೂಲದ ಪೂನಂ ಬಹದೂರ್ ಅನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಶುಕ್ರವಾರ ಸಂಜೆ 4.30ರ ಸುಮಾರಿಗೆ ಪೂರ್ಣಿಮಾ ತನ್ನ ಮಗ ಅರುಣ್ ನನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಾರುತಿ ಎಸ್ಕೋ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಪೂನಂ ಕೆಜಿ ಹಳ್ಳಿ ಕಡೆಗೆ ತೆರಳುತ್ತಿದ್ದಳು. ಶಾಲಾ ಮಕ್ಕಳನ್ನು ಡ್ರಾಪ್ ಮಾಡಿದ ಬಳಿಕ ಅತಿಯಾದ ಮಳೆಯಲ್ಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡ ಪೂನಂ ವಾಹನವನ್ನು ಮನೆಯೊಂದರ ಕಂಪೌಂಡ್ ಗೆ ಡಿಕ್ಕಿ ಹೊಡೆಸಿದ್ದಾಳೆ. ಬಳಿಕ ವಾಹನವು ಪಾದಚಾರಿ ಮಾರ್ಗದಲ್ಲಿ ನಡೆಯುತ್ತಿದ್ದ ಪೂರ್ಣಿಮಾ ಮೇಲೆ ಹರಿದಿದೆ.
ಅಪಘಾತವಾದ ತಕ್ಷಣ ಎಚ್ಚರ ವಹಿಸಿದ ಪುತ್ರ ಅರುಣ್ ಹಾಗೂ ಇನ್ನೋರ್ವ ಪಾದಚಾರಿ ಸುನೀಲ್ ಕುಮಾರ್ ಕೆಜಿ ಹಳ್ಳಿ ಸಂಚಾರಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೋಲೀಸರು ಚಾಲಕಿಯನ್ನು ಬಂಧಿಸಿದ್ದಾರೆ.
ಪೂನಂ ಕಳೆದ ಆರು ವರ್ಷಗಳಿಂದ ನಾಗವಾರದ ಪೂರ್ಣಸ್ಮೃತಿ ಶಾಲೆಯಲ್ಲಿ ಶಾಲಾ ವಾಹನ ಚಾಲಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಈಕೆ ಶಾಲೆ ಮುಗಿದ ಬಳಿಕ ಮಕ್ಕಳನ್ನು ಅವರ ಮನೆಗಳಿಕೆ ಡ್ರಾಪ್ ಮಾಡುತ್ತಿದ್ದಳು. ಘಟನೆ ನಡೆದ ವೇಳೆ ಶಾಲಾ ವಾಹನದಲ್ಲಿ ಯಾವ ವಿದ್ಯಾರ್ಥಿಗಳೂ ಇರಲಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪೂರ್ಣಿಮಾ ಪತಿ ಗೋವಿಂದರಾಜು ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಸದ್ಯ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT