ಬೆಂಗಳೂರು: ಶಾಲಾ ವಾಹನ ಡಿಕ್ಕಿ, ಮಗನ ಎದುರೇ ಮಹಿಳೆಯ ದುರ್ಮರಣ 
ರಾಜ್ಯ

ಬೆಂಗಳೂರು: ಶಾಲಾ ವಾಹನ ಡಿಕ್ಕಿ, ಮಗನ ಎದುರೇ ಮಹಿಳೆಯ ದುರ್ಮರಣ

ಅತಿ ವೇಗವಾಗಿ ಬಂದ ಶಾಲಾ ವಾಹನದಡಿ ಸಿಕ್ಕು 35 ವರ್ಷದ ಮಹಿಳೆಯೊಬ್ಬರು ತನ್ನ ಮಗೆನೆದುರೇ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.

ಬೆಂಗಳೂರು: ಅತಿ ವೇಗವಾಗಿ ಬಂದ ಶಾಲಾ ವಾಹನದಡಿ ಸಿಕ್ಕು 35 ವರ್ಷದ ಮಹಿಳೆಯೊಬ್ಬರು ತನ್ನ ಮಗನೆದುರೇ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಶಾಲಾ ವ್ಯಾನ್ ಮಹಿಳಾ ಚಾಲಕಿಯನ್ನು ಬಂಧಿಸಿದ ಪೋಲೀಸರು ಚಾಲಕಿಯ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆಂದು ಹೇಳಿದ್ದಾರೆ. 
ಸತ್ತ ಮಹಿಳೆಯನ್ನು ಗೋವಿಂದರಾಜು ಅವರ ಪತ್ನಿ ಪೂರ್ಣಿಮಾ ಎಂದು ಗುರುತಿಸಲಾಗಿದ್ದು ಆರೋಪಿ ಚಾಲಕಿ ನೇಪಾಳ ಮೂಲದ ಪೂನಂ ಬಹದೂರ್ ಅನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಶುಕ್ರವಾರ ಸಂಜೆ 4.30ರ ಸುಮಾರಿಗೆ ಪೂರ್ಣಿಮಾ ತನ್ನ ಮಗ ಅರುಣ್ ನನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಾರುತಿ ಎಸ್ಕೋ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಪೂನಂ ಕೆಜಿ ಹಳ್ಳಿ ಕಡೆಗೆ ತೆರಳುತ್ತಿದ್ದಳು. ಶಾಲಾ ಮಕ್ಕಳನ್ನು ಡ್ರಾಪ್ ಮಾಡಿದ ಬಳಿಕ ಅತಿಯಾದ ಮಳೆಯಲ್ಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡ ಪೂನಂ ವಾಹನವನ್ನು ಮನೆಯೊಂದರ ಕಂಪೌಂಡ್ ಗೆ ಡಿಕ್ಕಿ ಹೊಡೆಸಿದ್ದಾಳೆ. ಬಳಿಕ ವಾಹನವು ಪಾದಚಾರಿ ಮಾರ್ಗದಲ್ಲಿ ನಡೆಯುತ್ತಿದ್ದ ಪೂರ್ಣಿಮಾ ಮೇಲೆ ಹರಿದಿದೆ.
ಅಪಘಾತವಾದ ತಕ್ಷಣ ಎಚ್ಚರ ವಹಿಸಿದ ಪುತ್ರ ಅರುಣ್ ಹಾಗೂ ಇನ್ನೋರ್ವ ಪಾದಚಾರಿ ಸುನೀಲ್ ಕುಮಾರ್ ಕೆಜಿ ಹಳ್ಳಿ ಸಂಚಾರಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೋಲೀಸರು ಚಾಲಕಿಯನ್ನು ಬಂಧಿಸಿದ್ದಾರೆ.
ಪೂನಂ ಕಳೆದ ಆರು ವರ್ಷಗಳಿಂದ ನಾಗವಾರದ ಪೂರ್ಣಸ್ಮೃತಿ ಶಾಲೆಯಲ್ಲಿ ಶಾಲಾ ವಾಹನ ಚಾಲಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಈಕೆ ಶಾಲೆ ಮುಗಿದ ಬಳಿಕ ಮಕ್ಕಳನ್ನು ಅವರ ಮನೆಗಳಿಕೆ ಡ್ರಾಪ್ ಮಾಡುತ್ತಿದ್ದಳು. ಘಟನೆ ನಡೆದ ವೇಳೆ ಶಾಲಾ ವಾಹನದಲ್ಲಿ ಯಾವ ವಿದ್ಯಾರ್ಥಿಗಳೂ ಇರಲಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪೂರ್ಣಿಮಾ ಪತಿ ಗೋವಿಂದರಾಜು ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಸದ್ಯ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT