ನಾನು ಮುಖ್ಯಮಂತ್ರಿಯಾಗಿರಬಹುದು, ಆದರೆ ಸಂತೋಷವಾಗಿಲ್ಲ: ಸಿಎಂ ಕುಮಾರಸ್ವಾಮಿ ಕಣ್ಣೀರು 
ರಾಜ್ಯ

ನಾನು ಮುಖ್ಯಮಂತ್ರಿಯಾಗಿರಬಹುದು, ಆದರೆ ಸಂತೋಷವಾಗಿಲ್ಲ: ಸಿಎಂ ಕುಮಾರಸ್ವಾಮಿ ಕಣ್ಣೀರು

ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷವಿದೆ, ಆದರೆ ನಾನು ಸಂತೋಷವಾಗಿಲ್ಲ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷವಿದೆ, ಆದರೆ ನಾನು ಸಂತೋಷವಾಗಿಲ್ಲ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. 
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ನಾನು ಮೆರೆಯಬೇಕೆಂದು ಸಿಎಂ ಆಗಿಲ್ಲ, ನಾನು ಹೋದಕಡೆ ಜನ ಸೇರ್ತಾರೆ, ಸಂತೋಷ ಪಡ್ತಾರೆ. ಆದರೆ ಜನರು ನನ್ನ ಪಕ್ಷಕ್ಕೆ ಬಹುಮತ ನೀಡುವುದಿಲ್ಲ ಎಂದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. 
ರಾಜ್ಯದ ಜನತೆ ನನಗೆ ಬಹುಮತ ಕೊಟ್ಟು ಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ,  ನಾನು ಹೋದಕಡೆ ಜನ ಸೇರುತ್ತಾರೆ, ಸಂತೋಷ ಪಡ್ತಾರೆ, ಆದರೆ ದೌರ್ಭಾಗ್ಯವೆಂದರೆ ಅವರು ನಮ್ಮ ಪಕ್ಷಕ್ಕೆ ಮತ ನೀಡುವುದಿಲ್ಲ ಈ ಬಗ್ಗೆ ನನಗೆ ನೋವಿದೆ ಎಂದು ಸನ್ಮಾನ ಸಭೆಯಲ್ಲಿ ಕುಮಾರಸ್ವಾಮಿ ಭಾವುಕರಾಗಿ ನುಡಿದಿದ್ದಾರೆ. ನಾನು ಪೂರ್ಣ ಬಹುಮತ ದೊರೆತು ಸಿಎಂ ಆಗಿಲ್ಲ, ಸಧ್ಯಕ್ಕೆ ಸನ್ಮಾನ ಸ್ವೀಕರಿಸುವಂತೆ ಬಲವಂತ ಮಾಡಬೇಡಿ ಎಂದು ಕುಮಾರಸ್ವಾಮಿ ಸನ್ಮಾನವನ್ನು ನಿರಾಕರಿಸಿದ್ದಾರೆ.
"ಹೆಚ್ ಡಿಕೆ ಆರೋಗ್ಯದ ಬಗ್ಗೆ ನನಗೆ ಆತಂಕ, ಹಿಂದಿನ ಸರ್ಕಾರ ಬಿಟ್ಟು ಹೋಗಿರುವ 4000 ಕೋಟಿ ರೂ ಸಾಲ ಮನ್ನಾ ಹೊಣೆಗಾರಿಕೆ ಸಿಎಂ ಮೇಲಿದೆ"
ಇದೇ ವೇಳೆ ಮಾತನಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ರೈತರ ಸಾಲ ಮನ್ನಾಪೈಕಿ ಈ ಹಿಂದಿನ ಸರ್ಕಾರ ಬಿಟ್ಟು ಹೋಗಿರುವ 4000 ಕೋಟಿ ರೂಪಾಯಿ ಸಾಲ ತೀರಿಸುವ ಹೊಣೆಗಾರಿಕೆ ಸಿಎಂ ಕುಮಾರಸ್ವಾಮಿ ಮೇಲಿದೆ. ಆರೋಗ್ಯವನ್ನೂ ಲೆಕ್ಕಿಸದೇ ಕುಮಾರಸ್ವಾಮಿ 18 ಗಂಟೆ ಕೆಲಸ ಮಾಡ್ತಾರೆ, ಅವರ ಆರೋಗ್ಯದ ಬಗ್ಗೆ ನನಗೆ ಆತಂಕ ಇದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT