ಸಂಗ್ರಹ ಚಿತ್ರ 
ರಾಜ್ಯ

ಮಕ್ಕಳ ಕಳ್ಳರು ವದಂತಿ: ಬೀದರ್‌ನಲ್ಲಿ ಹೈದರಾಬಾದ್ ವ್ಯಕ್ತಿಯ ಬರ್ಬರ ಹತ್ಯೆ

ಮಕ್ಕಳ ಕಳ್ಳರ ವದಂತಿ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಹೈದರಾಬಾದ್ ಮೂಲದ ವ್ಯಕ್ತಿಯೋರ್ವನನ್ನು ಸ್ಥಳೀಯರು ಥಳಿಸಿದ್ದು ಪರಿಣಾಮ ಆತ ಮೃತಪಟ್ಟಿದ್ದಾನೆ...

ಹೈದರಾಬಾದ್: ಮಕ್ಕಳ ಕಳ್ಳರ ವದಂತಿ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಹೈದರಾಬಾದ್ ಮೂಲದ ವ್ಯಕ್ತಿಯೋರ್ವನನ್ನು ಸ್ಥಳೀಯರು ಥಳಿಸಿದ್ದು ಪರಿಣಾಮ ಆತ ಮೃತಪಟ್ಟಿದ್ದಾನೆ. 
ಕರ್ನಾಟಕದ ಬೀದರ್ ನ ಮುರ್ಕಿ ಗ್ರಾಮದಲ್ಲಿ 2500ಕ್ಕೂ ಹೆಚ್ಚು ಮಂದಿ ನಾಲ್ವರನ್ನು ತೀವ್ರವಾಗಿ ಥಳಿಸಿದ್ದು ಇದರಲ್ಲಿ ಹೈದರಾಬಾದ್ ಮೂಲದ ವ್ಯಕ್ತಿ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ನಾಲ್ವರು ಪೊಲೀಸರು ಸಹ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. 
ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ ನಲ್ಲಿ ಮಕ್ಕಳ ಕಳ್ಳರು ವದಂತಿ ಮುರ್ಕಿ ಗ್ರಾಮದಲ್ಲಿ ಹರಡಿದ್ದು ಈ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನ ನಾಲ್ವರ ಮೇಲೆ ತೀವ್ರ ಹಲ್ಲೆ ನಡೆಸಿದ್ದು ಪರಿಣಾಮ ಓರ್ವ ಮೃತಪಟ್ಟಿದ್ದಾನೆ. 
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ 32 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT