ಬಿಎಂಟಿಸಿ ಬಸ್ 
ರಾಜ್ಯ

ಉಚಿತ ಬಿಎಂಟಿಸಿ ಪಾಸ್ ಪಡೆಯಲು ಕಟ್ಟಡ ಕಾರ್ಮಿಕರ ನಿರಾಸಕ್ತಿ

ಸಿಲಿಕಾನ್ ಸಿಟಿಯಲ್ಲಿನ ಕಟ್ಟಡ ಕಾರ್ಮಿಕರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಉಚಿತ ಬಸ್ ಪಾಸ್ ನೀಡಲಾಗುತ್ತದೆ. ಆದರೆ. ಈ ಫಲಾನುಭವಿಗಳಲ್ಲಿ ಕೇವಲ 763 ಕಟ್ಟಡ ಕಾರ್ಮಿಕರು ಈ ಸೌಕರ್ಯವನ್ನು ಬಳಸಿಕೊಂಡಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಕಟ್ಟಡ ಕಾರ್ಮಿಕರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಉಚಿತ ಬಸ್ ಪಾಸ್ ನೀಡಲಾಗುತ್ತದೆ. ಆದರೆ. ಈ ಫಲಾನುಭವಿಗಳಲ್ಲಿ ಕೇವಲ  763 ಕಟ್ಟಡ ಕಾರ್ಮಿಕರು ಈ ಸೌಕರ್ಯವನ್ನು ಬಳಸಿಕೊಂಡಿದ್ದು, ಬಹುತೇಕ ಮಂದಿ ಪಾಸ್ ಪಡೆಯಲು ನಿರಾಸಕ್ತಿ ತೋರಿದ್ದಾರೆ.
ಪ್ಲಂಬರ್, ಕಟ್ಟಡ ಕಾರ್ಮಿಕರು ಸೇರಿದಂತೆ  ಕಾರ್ಮಿಕರ ಇಲಾಖೆಯಲ್ಲಿ 1 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದಾರೆ. ಇವರೆಲ್ಲರಿಗೂ   ಉಚಿತವಾಗಿ ಬಸ್ ಪಾಸ್ ನೀಡುವ ಯೋಜನೆಯನ್ನು   ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏ.21 ರಂದು ಜಾರಿಗೊಳಿಸಿದ್ದರು.
ಉಚಿತ ಪಾಸ್ ನೀಡಲು ಬಿಎಂಟಿಸಿ ಸಿದ್ದವಿದೆ. ಆದರೆ, ಪ್ರತಿಕ್ರಿಯೆ ನಿರಾಶದಾಯಕವಾಗಿದೆ. ಶಾಂತಿನಗರ ಬಸ್ ನಿಲ್ದಾಣದಲ್ಲಿ ಇಬ್ಬರು ಸಂಚಾರ ನಿಯಂತ್ರಕರನ್ನು ಈ ಕೆಲಸಕ್ಕಾಗಿ ನಿಯೋಜಿಸಲಾಗಿದೆ. ಆದರೆ, ಕೆಲವೇ ಮಂದಿ ಮಾತ್ರ ಪಾಸ್ ಪಡೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಬಿಎಂಟಿಸಿ ಅಧಿಕಾರಿಗಳು  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಬಹುತೇಕ ಕಟ್ಟಡ ಕಾರ್ಮಿಕರು ಲಾರಿ, ಆಟೋಗಳ ಮೂಲಕ ನಗರಕ್ಕೆ ಬರುತ್ತಾರೆ. ಇದರಿಂದಾಗಿ ಅವರಿಗೆ ಪಾಸಿನ ಅಗತ್ಯತೆ ಕಂಡುಬರುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.
ಕೆಎಸ್ ಆರ್ ಸಿಟಿ ಬಸ್ ನಲ್ಲಿ  ಇಬ್ಬರು ಮಕ್ಕಳೂ ಪ್ರಯಾಣಿಸಬಲ್ಲಾ ಉಚಿತ ಪಾಸ್ ನೀಡಲಾಗುತ್ತದೆ. ಆದರೆ, ಶಾಲಾ, ಕಾಲೇಜುಗಳಿಗೆ ಹೋಗುವಂತಹ ಮಕ್ಕಳಿಗೆ ಮಾತ್ರ 3 ರಿಂದ 5 ತಿಂಗಳ ಅವಧಿಯ ಪಾಸ್ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT