ಕರ್ನಾಟಕ; ಇಂದಿನಿಂದ ಶಿರಾಡಿ ಘಾಟ್ ಸಂಚಾರ ಮುಕ್ತ 
ರಾಜ್ಯ

ಕರ್ನಾಟಕ; ಇಂದಿನಿಂದ ಶಿರಾಡಿ ಘಾಟ್ ಸಂಚಾರ ಮುಕ್ತ

ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರ 2ನೇ ಹಂತದ ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಭಾನುವಾರದಿಂದ ಸಂಚಾರ ಮುಕ್ತಗೊಳ್ಳಲಿದೆ...

ಮಂಗಳೂರು: ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರ 2ನೇ ಹಂತದ ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಭಾನುವಾರದಿಂದ ಸಂಚಾರ ಮುಕ್ತಗೊಳ್ಳಲಿದೆ. 
ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಭಾನುವಾರ ಹಸಿರು ನಿಶಾನೆ ತೋರಲಿದ್ದು, ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. 
ರಸ್ತೆ ನಿರ್ಮಾಣ ಕಾರ್ಯಗಳನ್ನು ಪೂರ್ಣಗೊಳಿಸಲು ಮತ್ತೊಂದು ವಾರ ಕಾಲಾವಕಾಶಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಈಗಾಗಲೇ ಎರಡು ಭಾರಿ ಗಡುವನ್ನು ವಿಸ್ತರಣೆ ಮಾಡಲಾಗಿದ್ದು, ಮತ್ತಷ್ಟು ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ನಿರಾಕರಿಸಿತ್ತು. ಶಿರಾಡಿ ಘಾಟ್ ರಸ್ತೆಯನ್ನು ಬಂದ್ ಮಾಡಿದ್ದರಿಂದಾಗಿ ಮಂಗಳೂರಿನಿಂದ ಬೆಂಗಳೂರಿಗೆ ಬರಲು 8-9 ಗಂಟೆಗಳ ಬದಲಾಗಿ 10-11 ಗಂಟೆಗಳ ಕಾಲ ತೆಗೆದುಕೊಳ್ಳುತ್ತಿದೆ. ರಸ್ತೆಯನ್ನು ಮುಕ್ತಗೊಳಿಸುವುದರಿಂದ ಸಾವಿರಾರು ಜನರಿಗೆ ಸಹಾಯಕವಾಗಲಿದೆ ಎಂದು ಪಿಡಬ್ಲ್ಯೂಡಿ ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT