ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ 
ರಾಜ್ಯ

ಆತ್ಮಹತ್ಯೆಗೆ ಶರಣಾಗಿದ್ದ ಪೌರಕಾರ್ಮಿಕನ ಮನೆ-ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ಪರಮೇಶ್ವರ್

ವೇತನ ವಿಳಂಬದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಪೌರ ಕಾರ್ಮಿಕ ಸುಬ್ರಮಣಿ ಪತ್ನಿ ಕವಿತಾ ಅವರಿಗೆ ಬಿಬಿಎಂಪಿ ಶಾಲೆಯಲ್ಲಿ ಆಯಾ ಕೆಲಸ ನೀಡಿ, ಅವರ ಮಕ್ಕಳ ವಿದ್ಯಾಭ್ಯಾಸದ ಹೊಣೆ ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣ...

ಬೆಂಗಳೂರು; ವೇತನ ವಿಳಂಬದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಪೌರ ಕಾರ್ಮಿಕ ಸುಬ್ರಮಣಿ ಪತ್ನಿ ಕವಿತಾ ಅವರಿಗೆ ಬಿಬಿಎಂಪಿ ಶಾಲೆಯಲ್ಲಿ ಆಯಾ ಕೆಲಸ ನೀಡಿ, ಅವರ ಮಕ್ಕಳ ವಿದ್ಯಾಭ್ಯಾಸದ ಹೊಣೆ ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಭರವಸೆ ನೀಡಿದ್ದಾರೆ. 
ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಪರಮೇಶ್ವರ್ ಅವರು ಗಾಂಧಿನಗರ ಮುನೇಶ್ವರ ಬ್ಲಾಕ್'ನಲ್ಲಿರುವ ಸುಬ್ರಮಣಿ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮಹತ್ಯೆಗೆ ಪರಿಹಾರವಾಗಿ ಘೋಷಿಸಲಾಗಿದ್ದ ರೂ.10 ಲಕ್ಷಗಳಲ್ಲಿ ಬಾಕಿಯಿದ್ದ ರೂ.5 ಲಕ್ಷ ಪರಿಹಾರದ ಚೆಕ್'ನ್ನು ಕುಟುಂಬಕ್ಕೆ ವಿತರಿಸಿದರು. 
ಸುಬ್ರಮಣಿ ಅವರ ಪತ್ನಿ ಕವಿತಾ ಅವರಿಗೆ ಬಿಬಿಎಂಪಿ ಶಾಲೆಯಲ್ಲಿ ಆಯಾ ಕೆಲಸ ನೀಡಲಾಗುವುದು. ಜೊತೆಗೆ ಅವರ ಮಕ್ಕಳಾದ 10 ವರ್ಷದ ಪವಿತ್ರಾ ಮತ್ತು 7 ವರ್ಷದ ದರ್ಶನ್ ಅವರ ವಿದ್ಯಾಭ್ಯಾಸದ ಹೊಣೆಯನ್ನೂ ಬಿಬಿಎಂಪಿಯೇ ಹೊರಲಿದೆ ಎಂದು ಹೇಳಿದ್ದಾರೆ. ಜೊತೆಗೆ ಸುಬ್ರಮಣಿಯವರ ಕುಟುಂಬಕ್ಕೆ ವಾಸಿಸಲು ಮನೆ ನಿರ್ಮಾಣ ಮಾಡಿಕೊಡುವುದಾಗಿಯೂ ಭರವಸೆ ನೀಡಿದ್ದಾರೆ. 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರ ಪರಮೇಶ್ವರ್ ಅವರು, ಸುಬ್ರಮಣಿ ಆತ್ಮಹತ್ಯೆಗೆ ಶರಣಾಗಿರುವುದು ವಿಷಾದದ ಸಂಗತಿ. ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದ ಸುಬ್ರಮಣಿಯವರಿಗೆ ಗುತ್ತಿಗೆದಾರರು 6 ತಿಂಗಳಿನಿಂದ ವೇತನ ಬಾಕಿ ಇಟ್ಟಿದ್ದರು ಎಂಬುದು ಬೆಳಕಿಗೆ ಬಂದಿದೆ. ಗುತ್ತಿಗೆ ಪದ್ಧತಿ ಮುಗಿದ ಬಳಿಕ ಅವರನ್ನು ಗುತ್ತಿಗೆದಾರರು ನಿಯಮಬಾಹಿರವಾಗಿ ಪೌರ ಕಾರ್ಮಿಕ ಕೆಲಸಕ್ಕೆ ಸೇರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅದಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT