ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ 
ರಾಜ್ಯ

ಕಾಲಮಿತಿಯಲ್ಲಿ ಮೆಟ್ರೋ ಯೋಜನೆ ಪೂರ್ಣಗೊಳಿಸಿ: ಬಿಎಂಆರ್ ಸಿಎಲ್ ಗೆ ಪರಮೇಶ್ವರ್ ಸೂಚನೆ

ನಮ್ಮ ಮೆಟ್ರೋದ ಎಲ್ಲ ಯೋಜನೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಬೆಂಗಳೂರು ಮೆಟ್ರೋ ರೈಲು ಅಭಿವೃದ್ದಿ ನಿಗಮಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಬೆಂಗಳೂರು:ನಮ್ಮ ಮೆಟ್ರೋದ ಎಲ್ಲ ಯೋಜನೆಗಳನ್ನು ನಿಗದಿತ ಕಾಲಾವಧಿಯಲ್ಲಿ  ಪೂರ್ಣಗೊಳಿಸುವಂತೆ  ಬೆಂಗಳೂರು ಮೆಟ್ರೋ ರೈಲು ಅಭಿವೃದ್ದಿ ನಿಗಮಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಉಪಮುಖ್ಯಮಂತ್ರಿಗಳ ಕಚೇರಿಯಲ್ಲಿಂದು  ನೂತನ ವ್ಯವಸ್ಥಾಪಕ ನಿರ್ದೇಶಕ ಅಜೇಯ್ ಸೇಠ್ ಅವರೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಪ್ರಗತಿಯಲ್ಲಿರುವ ಎಲ್ಲ ಯೋಜನೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.

 ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಂಆರ್ ಸಿಎಲ್ ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್ ಸೇಠ್ ನೇಮಕಗೊಂಡಿದ್ದು, ಶೀಘ್ರದಲ್ಲಿಯೇ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ  ಸೂಚಿಸಿದ್ದೇನೆ. ಎಲ್ಲ ಯೋಜನೆಗಳು ತ್ವರಿತಗತಿಯಲ್ಲಿ ಆಗಬೇಕು ಎಂದು ತಿಳಿಸಿರುವುದಾಗಿ ಹೇಳಿದರು.

ಸರ್ಕಾರದಿಂದ ಮೆಟ್ರೋಗೆ  ಸಂಬಂದಿಸಿದಂತೆ ಹಲವು ಮಂಜೂರಾತಿಗಳು, ಹಣಕಾಸು ಸೌಲಭ್ಯ ದೊರಕಿಸಿಕೊಡುವಂತೆ ಅಜಯ್ ಸೇಠ್ ಮನವಿ ಮಾಡಿದ್ದಾರೆ.  ಆ ಕೆಲಸವನ್ನು ಆದಷ್ಟು ಶೀಘ್ರವೇ ಮಾಡಿಕೊಡುವ ಭರವಸೆ ನೀಡಲಾಗಿದೆ. ಬಿಎಂಆರ್ ಸಿಎಲ್ ಕಾಮಗಾರಿಗಳನ್ನು ಚುರುಕುಗೊಳಿಸುವ ಸಂಬಂಧ ಎಲ್ಲಾ ಸಲಹೆ,  ಸೂಚನೆಗಳನ್ನು ನೀಡಿರುವುದಾಗಿ ಪರಮೇಶ್ವರ್ ತಿಳಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT