ನೀರುಪಾಲಾದ ಯುವಕ 
ರಾಜ್ಯ

ಮೇಕೆದಾಟು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ಇಬ್ಬರು ಟೆಕ್ಕಿಗಳು

ಪ್ರವಾಸಕ್ಕೆಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟಿಗೆ ಆಗಮಿಸಿದ್ದ ಇಬ್ಬರು ಟೆಕ್ಕಿಗಳು ಸೆಲ್ಫಿ ತೆಗೆದುಕೊಳ್ಳುವ...

ರಾಮನಗರ: ಪ್ರವಾಸಕ್ಕೆಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟಿಗೆ ಆಗಮಿಸಿದ್ದ ಇಬ್ಬರು ಟೆಕ್ಕಿಗಳು ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ನೀರುಪಾಲಾದ ಘಟನೆ ಭಾನುವಾರ ನಡೆದಿದೆ.
ನೀರಿನಲ್ಲಿ ಕೊಚ್ಚಿ ಹೋದ ಯುವಕರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್​ ಉದ್ಯೋಗಿಗಳಾಗಿದ್ದ ಸಮೀರ್​ ರೆಹಮಾನ್​(29) ಮತ್ತು ಭವಾನಿ ಶಂಕರ್​(29) ಎಂದು ಗುರುತಿಸಲಾಗಿದೆ.
ನೀರುಪಾಲಾದ ಇಬ್ಬರೂ ಯುವಕರು ಮೂಲತಃ ಬೀದರ್ ​ನವರಾಗಿದ್ದು, ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು.
ನಿನ್ನೆ ಇಬ್ಬರೂ ಕಾವೇರಿ ನೀರು ಹರಿಯುವ ಮೇಕೆದಾಟುಗೆ ತೆರಳಿದ್ದರು. ಮೊದಲಿಗೆ ಸಮೀರ್ ರೆಹಮಾನ್ ಸೆಲ್ಫಿ‌ ತಗೆದುಕೊಳ್ಳುವ ವೇಳೆ ಜಾರಿ ನದಿಗೆ ಬಿದ್ದಿದ್ದಾನೆ. ಆತನನ್ನ ರಕ್ಷಿಸಲು ಹೋದ ಭವಾನಿ ಶಂಕರ್ ಕೂಡ ನೀರುಪಾಲಾಗಿದ್ದಾನೆ. ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಆದರೆ ನದಿ ರಭಸವಾಗಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಭಾನುವಾರ ಸಂಜೆಯ ನಂತರ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ ಪುನಃ ಕಾರ್ಯಾಚರಣೆ ಆರಂಭಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT