ಮೃತ ವ್ಯಕ್ತಿ ಮೊಹಮದ್ ಅಜಮ್ 
ರಾಜ್ಯ

ಬೀದರ್ ಹತ್ಯೆ ಪ್ರಕರಣ: ತನಿಖೆಗೆ ತೆಲಂಗಾಣ ಸರ್ಕಾರ ಕೈಜೋಡಿಸುವಂತೆ ಸಂತ್ರಸ್ತ ಕುಟುಂಬ ಮನವಿ

ಮಕ್ಕಳ ಕಳ್ಳರೆಂದು ಶಂಕಿಸಿ ವ್ಯಕ್ತಿಯ ಹತ್ಯೆ ನಡೆದ ಸಂಬಂಧ, .ಸಂತ್ರಸ್ತರ ಕುಟುಂಬ ಸದಸ್ಯರು ತನಿಖೆಗೆ ತೆಲಂಗಾಣ ಸರ್ಕಾರ ಕೂಡ ಕೈ ಜೋಡಿಸಬೇಕೆಂದು ಮನವಿ ..

ಬೆಳಗಾವಿ: ಮಕ್ಕಳ ಕಳ್ಳರೆಂದು ಶಂಕಿಸಿ ವ್ಯಕ್ತಿಯ ಹತ್ಯೆ ನಡೆದ ಸಂಬಂಧ, .ಸಂತ್ರಸ್ತರ ಕುಟುಂಬ ಸದಸ್ಯರು ತನಿಖೆಗೆ ತೆಲಂಗಾಣ ಸರ್ಕಾರ ಕೂಡ ಕೈ ಜೋಡಿಸಬೇಕೆಂದು ಮನವಿ ಮಾಡಿದೆ.
ಮೊಹಮದ್ ಅಜಮ್ ಹತ್ಯೆಯಾಗಿಲ್ಲ, ಆತ ಅಪಘಾತದಲ್ಲಿ ಸಾವನ್ನಪ್ಪಿದ್ದ ಎಂದು ಬಿಜೆಪಿ ಶಾಸಕ ಪ್ರಭು ಚವಾಣ್ ನೀಡಿದ ಹೇಳಿಕೆ ಬೆನ್ನಲ್ಲೇ ಮೊಹಮದ್ ಕುಟುಂಬಸ್ಥರು ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನನ್ನ ಸಹೋದರನನ್ನು ಕರ್ನಾಟಕದ ಜನ ಕ್ರೂರವಾಗಿ ಕೊಂದಿದ್ದಾರೆ, ನಮಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ತೆಲಂಗಾಣ ಸರ್ಕಾರ ಕರ್ನಾಟಕ ಜೊತೆ ಸಂವಹನ ನಡೆಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಮನವಿ ಮಾಡಿದ್ದಾರೆ.
ಶಾಸಕರು ಹೇಳಿರುವಂತೆ ನನ್ನ ಸಹೋದರ ಅಪಘಾತದಲ್ಲಿ ಗಾಯಗೊಂಡು ಸತ್ತಿಲ್ಲ, ಇಲ್ಲಿನ ಜನ ಆತನ ಮೇಲೆ ಹಲ್ಲೆ ಮಾಡಿದ ಪರಿಣಾಮ ಆತ ಮೃತಪಟ್ಟ ಎಂದು ಮೊಹಮದ್ ಅಜಮ್ ಸಹೋದರ ಅಸ್ಲಂ ಹೇಳಿದ್ದಾರೆ.,
ನಾವು ಮಧ್ಯಮ ವರ್ಗದ ಕುಟುಂಬದಿಂದ ಹ ಬಂದವರು, ನನ್ನ ಸಹೋದರ ಗೂಗಲ್ ನಲ್ಲಿ ಕೆಲಸ ಮಾಡುತ್ತಿದ್ದ,  ತಂದೆ ರೈಲ್ವೆ ಇಲಾಖೆಯಲ್ಲಿ ಅಕೌಂಟೆಂಟ್ಆಗಿದ್ದಾರೆ, 2 ವರ್ಷದ ಹಿಂದೆ ಅಜಮ್ ಗೆ ವಿವಾಹವಾಗಿದ್ದು, 18 ತಿಂಗಳ ಮಗು ಇದೆ ಎಂದು ಹೇಳಿದ್ದಾರೆ. ಇನ್ನು ಪ್ರಕರಣವನ್ನು ಡಿಜಿಪಿ ನೀಲಮಣಿ ರಾಜು ನೇರವಾಗಿ ಮಾನಿಟರ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT