ಮೃತ ವ್ಯಕ್ತಿ ಮೊಹಮದ್ ಅಜಮ್ 
ರಾಜ್ಯ

ಬೀದರ್ ಹತ್ಯೆ ಪ್ರಕರಣ: ತನಿಖೆಗೆ ತೆಲಂಗಾಣ ಸರ್ಕಾರ ಕೈಜೋಡಿಸುವಂತೆ ಸಂತ್ರಸ್ತ ಕುಟುಂಬ ಮನವಿ

ಮಕ್ಕಳ ಕಳ್ಳರೆಂದು ಶಂಕಿಸಿ ವ್ಯಕ್ತಿಯ ಹತ್ಯೆ ನಡೆದ ಸಂಬಂಧ, .ಸಂತ್ರಸ್ತರ ಕುಟುಂಬ ಸದಸ್ಯರು ತನಿಖೆಗೆ ತೆಲಂಗಾಣ ಸರ್ಕಾರ ಕೂಡ ಕೈ ಜೋಡಿಸಬೇಕೆಂದು ಮನವಿ ..

ಬೆಳಗಾವಿ: ಮಕ್ಕಳ ಕಳ್ಳರೆಂದು ಶಂಕಿಸಿ ವ್ಯಕ್ತಿಯ ಹತ್ಯೆ ನಡೆದ ಸಂಬಂಧ, .ಸಂತ್ರಸ್ತರ ಕುಟುಂಬ ಸದಸ್ಯರು ತನಿಖೆಗೆ ತೆಲಂಗಾಣ ಸರ್ಕಾರ ಕೂಡ ಕೈ ಜೋಡಿಸಬೇಕೆಂದು ಮನವಿ ಮಾಡಿದೆ.
ಮೊಹಮದ್ ಅಜಮ್ ಹತ್ಯೆಯಾಗಿಲ್ಲ, ಆತ ಅಪಘಾತದಲ್ಲಿ ಸಾವನ್ನಪ್ಪಿದ್ದ ಎಂದು ಬಿಜೆಪಿ ಶಾಸಕ ಪ್ರಭು ಚವಾಣ್ ನೀಡಿದ ಹೇಳಿಕೆ ಬೆನ್ನಲ್ಲೇ ಮೊಹಮದ್ ಕುಟುಂಬಸ್ಥರು ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನನ್ನ ಸಹೋದರನನ್ನು ಕರ್ನಾಟಕದ ಜನ ಕ್ರೂರವಾಗಿ ಕೊಂದಿದ್ದಾರೆ, ನಮಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ತೆಲಂಗಾಣ ಸರ್ಕಾರ ಕರ್ನಾಟಕ ಜೊತೆ ಸಂವಹನ ನಡೆಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಮನವಿ ಮಾಡಿದ್ದಾರೆ.
ಶಾಸಕರು ಹೇಳಿರುವಂತೆ ನನ್ನ ಸಹೋದರ ಅಪಘಾತದಲ್ಲಿ ಗಾಯಗೊಂಡು ಸತ್ತಿಲ್ಲ, ಇಲ್ಲಿನ ಜನ ಆತನ ಮೇಲೆ ಹಲ್ಲೆ ಮಾಡಿದ ಪರಿಣಾಮ ಆತ ಮೃತಪಟ್ಟ ಎಂದು ಮೊಹಮದ್ ಅಜಮ್ ಸಹೋದರ ಅಸ್ಲಂ ಹೇಳಿದ್ದಾರೆ.,
ನಾವು ಮಧ್ಯಮ ವರ್ಗದ ಕುಟುಂಬದಿಂದ ಹ ಬಂದವರು, ನನ್ನ ಸಹೋದರ ಗೂಗಲ್ ನಲ್ಲಿ ಕೆಲಸ ಮಾಡುತ್ತಿದ್ದ,  ತಂದೆ ರೈಲ್ವೆ ಇಲಾಖೆಯಲ್ಲಿ ಅಕೌಂಟೆಂಟ್ಆಗಿದ್ದಾರೆ, 2 ವರ್ಷದ ಹಿಂದೆ ಅಜಮ್ ಗೆ ವಿವಾಹವಾಗಿದ್ದು, 18 ತಿಂಗಳ ಮಗು ಇದೆ ಎಂದು ಹೇಳಿದ್ದಾರೆ. ಇನ್ನು ಪ್ರಕರಣವನ್ನು ಡಿಜಿಪಿ ನೀಲಮಣಿ ರಾಜು ನೇರವಾಗಿ ಮಾನಿಟರ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ