ಮೃತ ವ್ಯಕ್ತಿ ಮೊಹಮದ್ ಅಜಮ್ 
ರಾಜ್ಯ

ಬೀದರ್ ಹತ್ಯೆ ಪ್ರಕರಣ: ತನಿಖೆಗೆ ತೆಲಂಗಾಣ ಸರ್ಕಾರ ಕೈಜೋಡಿಸುವಂತೆ ಸಂತ್ರಸ್ತ ಕುಟುಂಬ ಮನವಿ

ಮಕ್ಕಳ ಕಳ್ಳರೆಂದು ಶಂಕಿಸಿ ವ್ಯಕ್ತಿಯ ಹತ್ಯೆ ನಡೆದ ಸಂಬಂಧ, .ಸಂತ್ರಸ್ತರ ಕುಟುಂಬ ಸದಸ್ಯರು ತನಿಖೆಗೆ ತೆಲಂಗಾಣ ಸರ್ಕಾರ ಕೂಡ ಕೈ ಜೋಡಿಸಬೇಕೆಂದು ಮನವಿ ..

ಬೆಳಗಾವಿ: ಮಕ್ಕಳ ಕಳ್ಳರೆಂದು ಶಂಕಿಸಿ ವ್ಯಕ್ತಿಯ ಹತ್ಯೆ ನಡೆದ ಸಂಬಂಧ, .ಸಂತ್ರಸ್ತರ ಕುಟುಂಬ ಸದಸ್ಯರು ತನಿಖೆಗೆ ತೆಲಂಗಾಣ ಸರ್ಕಾರ ಕೂಡ ಕೈ ಜೋಡಿಸಬೇಕೆಂದು ಮನವಿ ಮಾಡಿದೆ.
ಮೊಹಮದ್ ಅಜಮ್ ಹತ್ಯೆಯಾಗಿಲ್ಲ, ಆತ ಅಪಘಾತದಲ್ಲಿ ಸಾವನ್ನಪ್ಪಿದ್ದ ಎಂದು ಬಿಜೆಪಿ ಶಾಸಕ ಪ್ರಭು ಚವಾಣ್ ನೀಡಿದ ಹೇಳಿಕೆ ಬೆನ್ನಲ್ಲೇ ಮೊಹಮದ್ ಕುಟುಂಬಸ್ಥರು ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನನ್ನ ಸಹೋದರನನ್ನು ಕರ್ನಾಟಕದ ಜನ ಕ್ರೂರವಾಗಿ ಕೊಂದಿದ್ದಾರೆ, ನಮಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ತೆಲಂಗಾಣ ಸರ್ಕಾರ ಕರ್ನಾಟಕ ಜೊತೆ ಸಂವಹನ ನಡೆಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಮನವಿ ಮಾಡಿದ್ದಾರೆ.
ಶಾಸಕರು ಹೇಳಿರುವಂತೆ ನನ್ನ ಸಹೋದರ ಅಪಘಾತದಲ್ಲಿ ಗಾಯಗೊಂಡು ಸತ್ತಿಲ್ಲ, ಇಲ್ಲಿನ ಜನ ಆತನ ಮೇಲೆ ಹಲ್ಲೆ ಮಾಡಿದ ಪರಿಣಾಮ ಆತ ಮೃತಪಟ್ಟ ಎಂದು ಮೊಹಮದ್ ಅಜಮ್ ಸಹೋದರ ಅಸ್ಲಂ ಹೇಳಿದ್ದಾರೆ.,
ನಾವು ಮಧ್ಯಮ ವರ್ಗದ ಕುಟುಂಬದಿಂದ ಹ ಬಂದವರು, ನನ್ನ ಸಹೋದರ ಗೂಗಲ್ ನಲ್ಲಿ ಕೆಲಸ ಮಾಡುತ್ತಿದ್ದ,  ತಂದೆ ರೈಲ್ವೆ ಇಲಾಖೆಯಲ್ಲಿ ಅಕೌಂಟೆಂಟ್ಆಗಿದ್ದಾರೆ, 2 ವರ್ಷದ ಹಿಂದೆ ಅಜಮ್ ಗೆ ವಿವಾಹವಾಗಿದ್ದು, 18 ತಿಂಗಳ ಮಗು ಇದೆ ಎಂದು ಹೇಳಿದ್ದಾರೆ. ಇನ್ನು ಪ್ರಕರಣವನ್ನು ಡಿಜಿಪಿ ನೀಲಮಣಿ ರಾಜು ನೇರವಾಗಿ ಮಾನಿಟರ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT