ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ 
ರಾಜ್ಯ

ಪ್ರತ್ಯೇಕ ರಾಜ್ಯ ಕೂಗಿಗೆ ಸಮಮತವಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದರೆ ಹೋರಾಟ ಮಾಡಿ ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳಬೇಕೇ ವಿನಃ ಪ್ರತ್ಯೇಕ ರಾಜ್ಯ ಕೂಗು ಸಮಸ್ಯೆಗೆ ಪರಿಹಾರವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ...

ಶಿವಮೊಗ್ಗ: ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದರೆ ಹೋರಾಟ ಮಾಡಿ ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳಬೇಕೇ ವಿನಃ ಪ್ರತ್ಯೇಕ ರಾಜ್ಯ ಕೂಗು ಸಮಸ್ಯೆಗೆ ಪರಿಹಾರವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. 
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿರುವ ಅವರು, ಪ್ರತ್ಯೇಕ ರಾಜ್ಯ ಕುರಿತು ಯಾರೂ ಮಾತನಾಡಬಾರದು. ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದರೆ, ಹೋರಾಟ ಮಾಡಿ ಕೆಲಸ ಮಾಡಿಸಿಕೊಳ್ಳಲಿ. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಮಾಡುವಂತೆ ಆಗ್ರಹಿಸಲಿ. ಸಮಸ್ಯೆಗಳಿಗೆ ಪ್ರತ್ಯೇಕ ರಾಜ್ಯ ಕೂಗು ಪರಿಹಾರವಲ್ಲ. ಯಾವುದೇ ಪಕ್ಷವಾದರೂ ಹೀಗೆ ಹೇಳಿದರೂ ಅದು ತಪ್ಪು ಎಂದು ಹೇಳಿದ್ದಾರೆ. 
ಬಳಿಕ ಕಾಂಗ್ರೆಸ್ ನಾಯಕರ ಐಫೋನ್ ಉಡುಗೊರೆ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿರುವ ಅವರು, ನಮ್ಮ ಸಂಸದರು ಉಡುಗೊರೆಗಳನ್ನು ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ. 
ರಾಜ್ಯ ಸರ್ಕಾರ ರಾಜ್ಯದ ಆಂತರಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಇದರಿಂದ ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಯಲಿದೆ. ಅಲ್ಲದೆ, ಕಳೆದ ಸರ್ಕಾರದ ಅವಧಿಯ ಆಡಳಿತ ಕೂಡ ತಿಳಿಯುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT