ಸಿಎಂ ಕುಮಾರ ಸ್ವಾಮಿ ಆಗಮನಕ್ಕಾಗಿ ಮಾರ್ಗ ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆ 
ರಾಜ್ಯ

ಕೊಡಗು: ಮುಖ್ಯಮಂತ್ರಿಗಳ ದಾರಿ ಸುಗಮಕ್ಕಾಗಿ ಹಲವು ಮರಗಳಿಗೆ ಕೊಡಲಿ!

ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಜುಲೈ 19 ಮತ್ತು 20 ರಂದು ಕೊಡಗು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಹಾರಂಗಿ ಜಲಾಶಯ ಭಾಗಮಂಡಲ ಹಾಗೂ ...

ಮಡಿಕೇರಿ: ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಜುಲೈ 19 ಮತ್ತು 20 ರಂದು ಕೊಡಗು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಹಾರಂಗಿ ಜಲಾಶಯ ಭಾಗಮಂಡಲ ಹಾಗೂ ತಲಕಾವೇರಿಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ.
ಈ ವೇಳೆ ಸಿಎಂ ಸಂಚರಿಸುವ ಮಾರ್ಗದಲ್ಲಿ  ಬೀಳುವ ಅಪಾಯ ಇರುವ ಮರಗಳನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಶ್ರೀ ವಿದ್ಯಾ ಆದೇಶಿಸಿದ್ದಾರೆ. 
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ, ಅರಣ್ಯ ಇಲಾಖೆ ಅಧಿಕಾರಿಗಳು ಬೀಳುವ ಅಪಾಯದಲ್ಲಿರುವ ಮರಗಳ ಜೊತೆ ಚೆನ್ನಾಗಿರುವ ಮರಗಳಿಗೂ ಕೊಡಲಿ ಹಾಕಿದ್ದಾರೆ. 3ರಿಂದ 4 ಸಣ್ಣ ಮರಗಳು ಹಾಗೂ ಸುಮಾರು 10 ಮರಗಳಿಗೆ ಕೊಡಲಿ ಹಾಕಲಾಗಿದೆ ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ,
ಮರ ಕತ್ತರಿಸುವಂತೆ ಜಿಲ್ಲಾಧಿಕಾರಿ ಮಾಡಿರುವ ಆದೇಶವನ್ನು ಡಿಸಿ ಕಚೇರಿ ನಿರಾಕರಿಸಿದೆ, ತಾವು ಯಾವುದೇ ಆದೇಶ ಮಾಡಿಲ್ಲ ಎಂದು ಹೇಳಿದೆ, ಆದರೆ  ಡಿಸಿ ಹೊರಡಿಸಿರುವ ಆದೇಶದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಬಳಿ ಇದೆ. 
ಭಾಗಮಂಡಲ ಮತ್ತು ತಲಾ ಕಾವೇರಿ ರಸ್ತೆ ಮಾರ್ಗ ಮಧ್ಯದಲ್ಲಿ ಹಲವು ಮರಗಳನ್ನು ಕತ್ತರಿಸಿರುವುದನ್ನು ನೋಡಿರುವುದಾಗಿ ಕೊಡಗು ಏಕೀಕರಣ ಸಮಮಿತಿ ಸದಸ್ಯ ತಮ್ಮ ಪೂವಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT