ಸಂಗ್ರಹ ಚಿತ್ರ 
ರಾಜ್ಯ

ಉಡುಪಿ ಶಿರೂರು ಶ್ರೀಗಳ ಕುರಿತು ಒಂದಿಷ್ಟು ಮಾಹಿತಿ

ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಸ್ವಾಮೀಜಿಗಳಾಗಿದ್ದ ಲಕ್ಷ್ಮೀಶ್ವರ ತೀರ್ಥ ಸ್ವಾಮಿ ಶ್ರೀಗಳು ವಿಧಿವಶರಾಗಿದ್ದು, ಅವರ ಕುರಿತ ಕೆಲ ಕುತೂಹಲಕಾರಿ ಅಂಶಗಳು ಇಲ್ಲಿವೆ.

ಉಡುಪಿ: ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಸ್ವಾಮೀಜಿಗಳಾಗಿದ್ದ ಲಕ್ಷ್ಮೀಶ್ವರ ತೀರ್ಥ ಸ್ವಾಮಿ ಶ್ರೀಗಳು ವಿಧಿವಶರಾಗಿದ್ದು, ಅವರ ಕುರಿತ ಕೆಲ ಕುತೂಹಲಕಾರಿ ಅಂಶಗಳು ಇಲ್ಲಿವೆ.
ಉಡುಪಿ ಜಿಲ್ಲೆ ಹೆಬ್ರಿ ಬಳಿಯ ಮಡಾಮಕ್ಕಿ ಮೂಲದ ಶಿರೂರು ಶ್ರೀಗಳ ಪೂರ್ವಾಶ್ರಮದ ಹೆಸರು ಹರೀಶ್ ಆಚಾರ್ಯ. ಇವರ ತಂದೆಯ ಹೆಸರು ವಿಠಲ ಆಚಾರ್ಯ ಮತ್ತು ತಾಯಿಯ ಹೆಸರು ಕುಸುಮ ಆಚಾರ್ಯ. ಶಿರೂರು ಶ್ರೀಗಳು ಮಠದ ಪರಂಪರೆಯ ಮೂವತ್ತನೇ ಯತಿಗಳು.
1963ರಲ್ಲಿ ಜನಿಸಿದ ಶಿರೂರು ಶ್ರೀಗಳು, 1971ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು.  ಶಿರೂರು ಶ್ರೀಗಳು ಖುದ್ದು ಈಜುಪಟು ಮತ್ತು ಕರಾಟೆ ಪಟು ಆಗಿದ್ದರು. ಖ್ಯಾತ ಡ್ರಮ್ಸ್ ವಾದಕ ಶಿವಮಣಿಯೊಂದಿಗೆ ಡ್ರಮ್ಸ್ ಜುಗಲ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಉಡುಪಿ ಅಷ್ಟಮಠಗಳ ಯತಿಗಳಂತೆ ತಾವಲ್ಲ ಎಂದು ಸಾರಿದ್ದರು. ಮೂರು ವರ್ಷಗಳ ಹಿಂದೆ ಜಿಲ್ಲಾ ಈಜು ಸ್ಪರ್ಧೆಯಲ್ಲಿ, ಸ್ವತಃ ತಾವೇ ಒಂದು ಗಂಟೆಗೂ ಹೆಚ್ಚುಕಾಲ ಸಮುದ್ರದಲ್ಲಿ ಯೋಗಾಸನ ಮಾಡಿ ಸುದ್ದಿಯಾಗಿದ್ದರು.
ಸಂಗೀತ, ಸಾಹಿತ್ಯದಲ್ಲಿ ಶಿರೂರು ಶ್ರೀಗಳು ವಿಶೇಷ ಅಭಿಮಾನವನ್ನು ಹೊಂದಿದ್ದರು.  ಇನ್ನು ಶ್ರೀಗಳು ಜಾತಿ ಆಧಾರಿತವಾಗಿ ಊಟೋಪಚಾರ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪರ್ಯಾಯ ಸ್ವಾಗತ ಸಮಿತಿಗೆ ಅಧ್ಯಕ್ಷರನ್ನಾಗಿ ಬ್ರಾಹ್ಮಣ, ಜಿಎಸ್ಬಿ ಸಮುದಾಯದಿಂದ ಹೊರತಾಗಿ, ಮೊಗವೀರ ಸಮುದಾಯವರನ್ನು ನೇಮಿಸಿ, ಸುದ್ದಿಗೆ ಗ್ರಾಸವಾಗಿದ್ದರು.  ಮೂರು ಪರ್ಯಾಯವನ್ನು ಯಶಸ್ವಿಯಾಗಿ ಪೂರೈಸಿದ್ದ ಶಿರೂರು ಶ್ರೀಗಳು, 1978-80ರಲ್ಲಿ ನಡೆದ ಮೊದಲ ಪರ್ಯಾಯದ ವೇಳೆ ಉಡುಪಿ ಶ್ರೀ ಕೃಷ್ಣ ಮಠದ  ಪ್ರವೇಶಧ್ವಾರವನ್ನು ನವೀಕರಿಸಿದ್ದರು. 
ಇನ್ನು ಎರಡನೇ ಪರ್ಯಾಯದ ವೇಳೆ ಶ್ರೀಗಳು ಶ್ರೀಕೃಷ್ಣ ವಿಗ್ರಹಕ್ಕೆ ಮಾಡಿದ್ದ ನಾನಾ ಬಗೆಯ ವಿಶೇಷ ಅಲಂಕಾರಗಳು ಸಾವಿರಾರು ಭಕ್ತರನ್ನು ಆಕರ್ಷಿಸಿತ್ತು.  ಇತ್ತೀಚಿನ ವಿಧಾನ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿ ನಾಮಪತ್ರವನ್ನೂ ಸಲ್ಲಿಕೆ ಮಾಡಿ ಬಳಿಕ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದರು. ಅಲ್ಲದೆ ಅವಕಾಶ ಸಿಕ್ಕರೆ ಬಿಜೆಪಿ ಟಿಕೆಟಿನಿಂದ ಸ್ಪರ್ಧಿಸುವುದಾಗಿ ಬಹಿರಂಗವಾಗಿಯೇ ಹೇಳಿದ್ದರು.
ಮಠಕ್ಕೆ ಬಂದ ಬಡವರಿಗೆ ಊಟ, ಹಣಕಾಸು ನೆರವು ನೀಡುತ್ತಿದ್ದ ಶಿರೂರು ಶ್ರೀಗಳು, ಹಿಂದೊಮ್ಮೆ ಉಡುಪಿ ನಗರಕ್ಕೆ ನೀರಿನ ಸಮಸ್ಯೆ ಉಂಟಾದಾಗ ತಾವೇ ಮುಂದೆ ನಿಂತು ಸಮಸ್ಯೆಯನ್ನು ಬಗೆಹರಿಸಿದ್ದರು.
ವಿವಾದಗಳ ಸುಳಿಯಲ್ಲಿ ಶ್ರೀಗಳು
ಜನಸಾಮಾನ್ಯರ ಸ್ವಾಮೀಜಿಯೆಂದೇ ಹೆಸರಾಗಿದ್ದ ಶಿರೂರು ಶ್ರೀಗಳು, ತಮ್ಮ ಪಟ್ಟದ ದೇವರ ವಿಚಾರದಲ್ಲಿ ನಡೆಯುತ್ತಿದ್ದ ವಿದ್ಯಮಾನದಿಂದ ತೀರಾ ಮನನೊಂದಿದ್ದರು. 48ವರ್ಷಗಳಿಂದ ಪೂಜಿಸಿಕೊಂಡು ಬಂದಿದ್ದ ಪಟ್ಟದದೇವರು ಕೈತಪ್ಪಿದ ವಿಚಾರದಲ್ಲಿ ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗಿ ಬಿಕ್ಕಿಬಿಕ್ಕಿ ಅಳುತ್ತಿದ್ದರು ಎನ್ನುವ ಮಾಹಿತಿಯಿದೆ. 
ಇನ್ನು ಸೋದೆ ಮಠದ ಹಿಂದಿನ ಶ್ರೀಗಳಿಂದ ಸನ್ಯಾಸತ್ವ ಪಡೆದಿದ್ದ ಶಿರೂರು ಶ್ರೀಗಳ ಉತ್ತರಾಧಿಕಾರಿ ನೇಮಿಸಲು ಒಪ್ಪದ ನಿರ್ಧಾರ ಅಷ್ಟಮಠಗಳ ಇತರ ಸ್ವಾಮೀಜಿಗಳನ್ನು ಕೆರಳಿಸಿತ್ತು. 
ಶಿರೂರು ಶ್ರೀಗಳು ಅನಾರೋಗ್ಯ ಕಾರಣ ಪೂಜೆ ಸಲ್ಲಿಸಲಾಗುವುದಿಲ್ಲ ಎಂದು ಪಟ್ಟದ ದೇವರ ವಿಗ್ರಹವನ್ನು ಶ್ರೀಕೃಷ್ಣ ಮಠಕ್ಕೆ ಒಪ್ಪಿಸಿದ್ದರು. ಆದರೆ ಇತರ ಮಠಾಧೀಶರು ಪಟ್ಟದ ದೇವರನ್ನು ಶಿಷ್ಯ ಸ್ವೀಕಾರ ಮಾಡಿಕೊಳ್ಳದೆ ಹಿಂತಿರುಗಿಸಲಾಗುವುದಿಲ್ಲ ಎಂದು ಪಟ್ಟು ಹಿಡಿದ್ದಿದ್ದರು. ಈ ನಡೆಯ ಬಗ್ಗೆ ಬಹಿರಂಗವಾಗಿ ವಾಗ್ದಳಿ ನಡೆಸಿದ್ದ ಶ್ರೀಗಳು ನ್ಯಾಯ ಕೇಳಲು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅಲ್ಲದೆ ಒಂದು ವೇಳೆ ಪಟ್ಟದ ದೇವರನ್ನು ಹಿಂತಿರುಗಿಸದಿದ್ದರೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಶಿರೂರು ಮಠದ 30ನೇ ಯತಿಗಳಾಗಿದ್ದ ಶ್ರೀಗಳು ಮೂರು ಪರ್ಯಾಯಗಳನ್ನು ಪೂರೈಸಿದ್ದರು. ಕಳೆದ ಕೆಲವು ದಿನಗಳಿಂದ ತನ್ನ ಮಠದ ಪಟ್ಟದ ದೇವರನ್ನು ಮರಳಿ ಪಡೆಯಲು ಹೋರಾಡುತ್ತಿದ್ದರು. ವಿಭಿನ್ನ ವ್ಯಕ್ತಿತ್ವ, ನೇರ ನುಡಿಯ ಶ್ರೀಗಳು ಅಷ್ಠಮಠದ ಸ್ವಾಮೀಜಿಗಳಿಗೆ ಮಕ್ಕಳಿದ್ದಾರೆ ಎಂದು ಹೇಳಿ ವಿವಾದಕ್ಕೀಡಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT