ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

'ನಮ್ಮ ಮೆಟ್ರೊ' ಯೋಜನೆಗೆ ರಕ್ಷಣಾ ಇಲಾಖೆ ಭೂಮಿ ನೀಡಲು ಸಿಎಂ ಕುಮಾರಸ್ವಾಮಿಗೆ ಕೇಂದ್ರ ಭರವಸೆ

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಅಧಿಕೃತ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಭಾಗಿಯಾದ ...

ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಅಧಿಕೃತ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಭಾಗಿಯಾದ ಹೆಚ್ ಡಿ ಕುಮಾರಸ್ವಾಮಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎನ್ನಬಹುದು.

ಕೇಂದ್ರ ಸರ್ಕಾರದಿಂದ ರಾಜ್ಯದ ವಿವಿಧ ಇಲಾಖೆಗಳಿಗೆ ಸುಮಾರು 2,500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಯೋಜನೆಗೆ ಸರ್ಕಾರದ ಭೂಮಿಯನ್ನು ಪಡೆಯುವಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ.

ನಿನ್ನೆ ದಿನವಿಡೀ ಸಭೆಯಲ್ಲಿ ನಿರತರಾಗಿದ್ದ ಮುಖ್ಯಮಂತ್ರಿಗಳು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್, ಕೇಂದ್ರ ಆಹಾರ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್, ಕೃಷಿ ಸಚಿವ ರಾಧಾ ಮೋಹನ್ ಸಿಂಗ್, ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮೆಟ್ರೊ ಜಾಲವನ್ನು ವಿಸ್ತರಿಸಲು ಮತ್ತು ಮೆಟ್ರೊ ನಿಲ್ದಾಣಗಳ ನಿರ್ಮಾಣಕ್ಕೆ ಭೂಮಿಯ ಅವಶ್ಯಕತೆಯಿದೆ. ಅದು ರಕ್ಷಣಾ ಸಚಿವಾಲಯಕ್ಕೆ ಸೇರಿದ ಜಾಗವಾಗಿತ್ತು. ಈ ಭೂಮಿಯನ್ನು ಒದಗಿಸಿಕೊಡುವಂತೆ ಸಚಿವೆ ನಿರ್ಮಲಾ ಸೀತಾರಾಮ್ ಅವರಲ್ಲಿ ಮನವಿ ಮಾಡಿಕೊಂಡಾಗ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಸಂಗ್ರಹಕ್ಕೆ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರದಿಂದ 954 ಕೋಟಿ ರೂಪಾಯಿ ಬಾಕಿ ಹಣವನ್ನು ಪಡೆಯುವಲ್ಲಿ ಕೂಡ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಪಾಸ್ವಾನ್ ಈ ಸಂಬಂಧ ಅಗತ್ಯ ಆದೇಶ ಹೊರಡಿಸಿದ್ದಾರೆ ಎಂದರು.

ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೆಗಾ ಡೈರಿ ಸ್ಥಾಪಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶಂಸಿಸಿದ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಇದಕ್ಕೆ 900 ಕೋಟಿ ರೂಪಾಯಿ ಹಣ ಒದಗಿಸುವ ಭರವಸೆ ನೀಡಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಯೋಜನೆ ತ್ವರಿತ ಜಾರಿಗೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT