ಸಂಗ್ರಹ ಚಿತ್ರ 
ರಾಜ್ಯ

ಮಂಡ್ಯ: ಶಿಕ್ಷಕರ ಕಿರುಕುಳ, ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಶಿಕ್ಷಕರು ಕಿರುಕುಳ ನಿಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ: ಶಿಕ್ಷಕರು ಕಿರುಕುಳ ನಿಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಕೆ.ಆರ್ ಪೇಟೆಯ  ಕೋಡಿಮರನಹಳ್ಳಿ ಗ್ರಾಮದ ವಿದ್ಯಾರ್ಥಿನಿ ಚೈತನ್ಯ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾನಿಕೇತನ್ ಖಾಸಗಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಈಕೆಗೆ ಕಡಿಮೆ ಅಂಕ ಗಳಿಸಿದ್ದಳೆಂದು ಶಿಕ್ಷಕರೊಬ್ಬರು ಕಿರುಕುಳ ನೀಡುತ್ತಿದ್ದರೆಂದು ತಿಳಿದುಬಂದಿದೆ.
ಶಿಕ್ಷಕನ ನಿತ್ಯದ ಕಿರುಕುಳದಿಂದ ಬೇಸತ್ತ ಚೈತನ್ಯ ಶಾಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ಬಹಿರಂಗವಾಗುತ್ತಲೇ ಆರೋಪಿ ಶಿಕ್ಷಕ ನಾಪತ್ತೆಯಾಗಿದ್ದಾನೆ.
ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಘಟನೆ ಬಗ್ಗೆ ಕಿಕ್ಕೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT