ರಾಜ್ಯ

ಮಂಡ್ಯ: ಶಿಕ್ಷಕರ ಕಿರುಕುಳ, ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ

Raghavendra Adiga
ಮಂಡ್ಯ: ಶಿಕ್ಷಕರು ಕಿರುಕುಳ ನಿಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಕೆ.ಆರ್ ಪೇಟೆಯ  ಕೋಡಿಮರನಹಳ್ಳಿ ಗ್ರಾಮದ ವಿದ್ಯಾರ್ಥಿನಿ ಚೈತನ್ಯ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾನಿಕೇತನ್ ಖಾಸಗಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಈಕೆಗೆ ಕಡಿಮೆ ಅಂಕ ಗಳಿಸಿದ್ದಳೆಂದು ಶಿಕ್ಷಕರೊಬ್ಬರು ಕಿರುಕುಳ ನೀಡುತ್ತಿದ್ದರೆಂದು ತಿಳಿದುಬಂದಿದೆ.
ಶಿಕ್ಷಕನ ನಿತ್ಯದ ಕಿರುಕುಳದಿಂದ ಬೇಸತ್ತ ಚೈತನ್ಯ ಶಾಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ಬಹಿರಂಗವಾಗುತ್ತಲೇ ಆರೋಪಿ ಶಿಕ್ಷಕ ನಾಪತ್ತೆಯಾಗಿದ್ದಾನೆ.
ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಘಟನೆ ಬಗ್ಗೆ ಕಿಕ್ಕೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SCROLL FOR NEXT