ಲಕ್ಷ್ಮೀವರ ತೀರ್ಥ ಸ್ವಾಮಿ 
ರಾಜ್ಯ

ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜೀ ಅಂತ್ಯಕ್ರಿಯೆ!

ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಗಳ ಅಂತ್ಯಕ್ರಿಯೆ ನಡೆಯಿತು...

ಉಡುಪಿ: ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಗಳ ಅಂತ್ಯಕ್ರಿಯೆ ನಡೆಯಿತು. 
ಶಿರೂರು ಮೂಲ ಮಠದ ಒಳಾಂಗಣದಲ್ಲಿ ಬೃಂದಾವನ ರಚನೆ ಮಾಡಿ, ಶ್ರೀಗಳು ಬಳಸುತ್ತಿದ್ದ ಕರ್ಪೂರ, ಕಾಳು ಮೆಣಸು, ಉಪ್ಪು, ಪೂಜಾ ಪರಿಕರಗಳು ಮತ್ತು ಹತ್ತಿ ಇವುಗಳನ್ನೆಲ್ಲಾ ಬೃಂದಾವನದಲ್ಲಿ ಇರಿಸಿ ಕುಳಿತ ಸ್ಥಿತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. 
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿನ್ನೆ ತೀವ್ರ ಅನಾರೋಗ್ಯದಿಂದ ಶ್ರೀಗಳು ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಹೊಟ್ಟೆಯಲ್ಲಿ ತೀವ್ರ ರಕ್ತ ಸ್ರಾವವಾಗಿ ನಿನ್ನೆ ದಾಖಲಾಗಿದ್ದ ಶ್ರೀಗಳನ್ನು ವೈದ್ಯರು ಕಾಲಕಾಲಕ್ಕೆ ನಿಗಾವಹಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದರು. 
ಶಿರೂರು ಮಠದ 30ನೇ ಯತಿಗಳಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಗಳು ಮೂರು ಪರ್ಯಾಯಗಳನ್ನು ಪೂರೈಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT